ಬ್ರೇಕಿಂಗ್ ನ್ಯೂಸ್
25-02-21 09:58 am Headline Karnataka News Network ದೇಶ - ವಿದೇಶ
ಆಲಪ್ಪುಝ, ಫೆ.25: ಎಸ್ಡಿಪಿಐ ಮತ್ತು ಆರೆಸ್ಸೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು ಆರೆಸ್ಸೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆಗೈದ ಘಟನೆ ಇಲ್ಲಿನ ವಯಲಾರ್ ಪಂಚಾಯತ್ ವ್ಯಾಪ್ತಿಯ ನಾಗಂಕುಲರ ಎಂಬಲ್ಲಿ ನಡೆದಿದೆ.
ಆರೆಸ್ಸೆಸ್ ಶಾಖಾ ಮುಖ್ಯ ಶಿಕ್ಷಕ್ ಆಗಿದ್ದ ನಂದು ಯಾನೆ ರಾಹುಲ್ ಕೃಷ್ಣ (22) ಕೊಲೆಯಾದ ಯುವಕ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇರಳ ಭೇಟಿಯನ್ನು ವಿರೋಧಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ಎಸ್ಡಿಪಿಐ ಮುಂದಾಗಿತ್ತು. ಈ ಸಂಬಂಧ ವಾರದ ಹಿಂದೆ ಎಸ್ಡಿಪಿಐ ಕಾರ್ಯಕರ್ತರು ಸೇರಿ ವಯಲಾರ್ ನಲ್ಲಿ ಸಭೆ ನಡೆಸಿದ್ದರು. ಕಳೆದ ಭಾನುವಾರ ಯೋಗಿ ಆದಿತ್ಯನಾಥ್, ಕಾಸರಗೋಡಿಗೆ ಆಗಮಿಸಿ ಬಿಜೆಪಿ ಹಮ್ಮಿಕೊಂಡಿದ್ದ ವಿಜಯ ಯಾತ್ರೆಗೆ ಚಾಲನೆ ನೀಡಿದ್ದರು. ಇದನ್ನು ವಿರೋಧಿಸಿ ಎಸ್ಡಿಪಿಐ ಕಾರ್ಯಕರ್ತರು ಮಾರ್ಚ್ ನಡೆಸಿದ್ದಲ್ಲದೆ, ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಘೋಷಣೆ ಕೂಗಿದ್ದರು.
ಬುಧವಾರ ಮತ್ತೆ ಆಲಪ್ಪುಝ ಜಿಲ್ಲೆಯ ವಯಲಾರ್ ಪ್ರದೇಶದಲ್ಲಿ ಎಸ್ಡಿಪಿಐ ಕಾರ್ಯಕರ್ತರು ಮಾರ್ಚ್ ನಡೆಸಿದ್ದಲ್ಲದೆ, ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಅವಾಚ್ಯವಾಗಿ ನಿಂದಿಸುತ್ತಾ ಘೋಷಣೆ ಕೂಗಿದ್ದು ಆರೆಸ್ಸೆಸ್ ಕಾರ್ಯಕರ್ತರನ್ನು ಕೆರಳಿಸಿತ್ತು. ರಾತ್ರಿ ವೇಳೆಗೆ, ಎರಡೂ ಕಡೆಯ ಗುಂಪುಗಳು ಪ್ರತ್ಯೇಕವಾಗಿ ಮಾರ್ಚ್ ನಡೆಸಿದ್ದಲ್ಲದೆ ನಿಂದನೆಯ ಘೋಷಣೆಗಳನ್ನು ಕೂಗಿತ್ತು. ಆನಂತರ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಎಸ್ಡಿಪಿಐ ಕಡೆಯಿಂದ ದಾಳಿ ನಡೆದಿದೆ ಎನ್ನಲಾಗುತ್ತಿದ್ದು ಆರೆಸ್ಸೆಸ್ ಕಾರ್ಯಕರ್ತ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಘರ್ಷಣೆಯಲ್ಲಿ ಎಸ್ಡಿಪಿಐ ಮತ್ತು ಆರೆಸ್ಸೆಸ್ ಸೇರಿದ ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಘಟನೆಯನ್ನು ಖಂಡಿಸಿ ಬಿಜೆಪಿ ಆಲಪ್ಪುಝ ಜಿಲ್ಲಾ ಘಟಕ ಬೆಳಗ್ಗಿನಿಂದ ಸಂಜೆಯ ವರೆಗೆ ಹರತಾಳಕ್ಕೆ ಕರೆ ನೀಡಿದೆ.
ವಯಲಾರ್ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ನೆಲೆಯಾಗಿದ್ದು ಹೆಚ್ಚುವರಿ ಪೊಲೀಸರ ಪಡೆಯನ್ನು ನಿಯೋಜಿಸಲಾಗಿದೆ.
AN RSS worker was hacked to death allegedly by members of Social Democratic Party of India (SDPI), the political wing of Popular Front of India, during a clash in Alappuzha district on Wednesday night.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm