ಬ್ರೇಕಿಂಗ್ ನ್ಯೂಸ್
01-03-21 08:18 pm Headline Karnataka News Network ದೇಶ - ವಿದೇಶ
ತಮಿಳುನಾಡು, ಮಾ 01: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಿಕ್ಸ್ ಪ್ಯಾಕ್ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಫೋಟೋಗೆ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಮತ್ತೆ ಸುದ್ದಿಯಾಗಿದ್ದಾರೆ. ಅದೂ ಫಿಟ್ನೆಸ್ ವಿಚಾರಕ್ಕೆ. ಅವರು ಒಂದೇ ಕೈಯಲ್ಲಿ ಪುಶ್-ಅಪ್ಸ್ ತೆಗೆದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ತಮಿಳುನಾಡು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಹೀಗಾಗಿ, ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇಂದು ಅವರು ತಮಿಳುನಾಡಿನ ತಿರುನಲ್ವೇಲಿಯ ಸೇಂಟ್ ಕ್ಸೇವಿಯರ್ಸ್ ಕಾಲೇಜಿನ ವಿದ್ಯಾರ್ಥಿ ಮತ್ತು ಶಿಕ್ಷಕರ ಜತೆ ಸಂವಾದ ನಡೆಸಿದ್ದಾರೆ. ಈ ವೇಳೆ 10 ನೇ ತರಗಿ ವಿದ್ಯಾರ್ಥಿಯೋರ್ವ ಪುಶ್-ಅಪ್ಸ್ ಚಾಲೆಂಜ್ ಹಾಕಿದ್ದಾರೆ. ಇದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ.

ಜನರ ಮಧ್ಯೆಯೇ ರಾಹುಲ್ ಗಾಂಧಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಪುಶ್-ಅಪ್ ನಡೆಸಿದ್ದಾರೆ. ವಿದ್ಯಾರ್ಥಿ ತೆಗೆದಷ್ಟು ಡಿಪ್ಸ್ ತೆಗೆಯೋಕೆ ರಾಹುಲ್ ಗಾಂಧಿ ಬಳಿ ಸಾಧ್ಯವಾಗಿಲ್ಲ. ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಒಂದೇ ಕೈ ಮೂಲಕ ಪುಶ್-ಅಪ್ಸ್ ತೆಗೆದು ಅಚ್ಚರಿ ಮೂಡಿಸಿದ್ದಾರೆ. ಎರಡೂ ಕೈಯಲ್ಲಾದರೆ ಡಿಪ್ಸ್ ತೆಗೆಯೋದು ಸುಲಭ. ಆದರೆ, ಒಂದೇ ಕೈಯಲ್ಲಿ ಡಿಪ್ಸ್ ತೆಗೆಯುವುದು ಕಷ್ಟ.
ಏನಿದು ಸಿಕ್ಸ್ ಪ್ಯಾಕ್ ಸಮಾಚಾರ?
ಇತ್ತೀಚೆಗೆ ರಾಹುಲ್ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದು, ಫಿಟ್ನೆಸ್ ಟಿಪ್ಸ್ ಕೇಳಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್ಡೌನ್ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್ಗಳು ಬಂದ್ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್ನೆಸ್ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್ ಗಾಂಧಿ ಜಿಮ್ ಬಿಟ್ಟಿಲ್ಲ ಎನ್ನುವುದು ಈ ಫೋಟೋ ಮೂಲಕ ಸಾಬೀತಾಗಿತ್ತು.
#WATCH: Congress leader Rahul Gandhi doing push-ups and 'Aikido' with students of St. Joseph's Matriculation Hr. Sec. School in Mulagumoodubn, Tamil Nadu pic.twitter.com/qbc8OzI1HE
— ANI (@ANI) March 1, 2021
Congress leader Rahul Gandhi, in Tamil Nadu ahead of the state elections, is trying to connect with locals with his fierce poll speeches, one-on-one interactions and also an apparent demonstration of his physical strength.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm