ಬ್ರೇಕಿಂಗ್ ನ್ಯೂಸ್
03-03-21 12:01 pm Headline Karnataka News Network ದೇಶ - ವಿದೇಶ
ಮುಂಬೈ, ಮಾ 3: ಕೋವಿಡ್-19 ವಿರುದ್ಧ ಲಸಿಕೆಯ ಎರಡನೇ ಡೋಸ್ ಪಡೆದ ಸ್ವಲ್ಪ ಹೊತ್ತಿನ ಬಳಿಕ ಮಹಾರಾಷ್ಟ್ರದ 45ರ ವಯಸ್ಸಿನ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ವೈದ್ಯರೊಬ್ಬರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಭಿವಂಡಿ ನಿವಾಸಿ ಸುಖದೇವ್ ಕಿರ್ದಾತ್ ಎರಡನೇ ಡೋಸ್ ಪಡೆದ ಬಳಿಕ ಸುಮಾರು 15 ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇದ್ದರು.
ಅಸ್ವಸ್ಥರಾದ ಸುಖದೇವ್ ಅವರನ್ನು ಹತ್ತಿರದ ಇಂದಿರಾ ಗಾಂಧಿ ಸ್ಮಾರಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಅಲ್ಲಿ ಅವರು ಮೃತಪಟ್ಟರೆಂದು ಘೋಷಿಸಲಾಯಿತು.

ಸಾವಿಗೆ ಕಾರಣ ಏನೆಂದು ಇನ್ನೂ ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ಇದು ಸ್ಪಷ್ಟವಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಆರೋಗ್ಯ ಕಾರ್ಯಕರ್ತರೆಂಬ ನೆಲೆಯಲ್ಲಿ ಸುಖದೇವ್ ಜನವರಿ 28ರಂದು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದರು.
“ಅವರು ಒಂದು ತಿಂಗಳ ಹಿಂದೆ ತನ್ನ ಮೊದಲ ಡೋಸ್ ಪಡೆದಿದ್ದರು. ಯಾವುದೇ ಸಮಸ್ಯೆಯಾಗಿರಲಿಲ್ಲ. ಎರಡನೇ ಡೋಸ್ ಕೊಡುವ ಮೊದಲು ಸಂಪೂರ್ಣ ವೈದ್ಯಕೀಯ ತಪಾಸಣೆ ಮಾಡಲಾಗಿತ್ತು. ಅವರಿಗೆ ಹಲವು ವರ್ಷಗಳಿಂದ ರಕ್ತದೊತ್ತಡ ಇರುವುದು ನಮಗೆ ಗೊತ್ತಾಗಿದೆ. ಕಾಲಿನಲ್ಲಿ ದಪ್ಪವಾಗುವ ಲಕ್ಷಣಗಳಿದ್ದವು. ಇಲ್ಲಿ ಅವರ ಬಿಪಿ ಹಾಗೂ ಆಕ್ಸಿಜನ್ ಸಾಮಾನ್ಯವಾಗಿತ್ತು. ಅವರ ಸಾವಿಗೆ ಕಾರಣ ಏನೆಂದು ಹೇಳಲು ಕಷ್ಟವಾಗುತ್ತದೆ. ಮರಣೋತ್ತರ ವರದಿಯಿಂದಲೇ ನಿಜಾಂಶ ಗೊತ್ತಾಗಬೇಕಾಗಿದೆ ಎಂದು ಆಸ್ಪತ್ರೆಯ ವೈದ್ಯ ಕೆ.ಆರ್. ಖರತ್ ತಿಳಿಸಿದ್ದಾರೆ.
60ಕ್ಕಿಂತ ಹೆಚ್ಚು ವಯಸ್ಸಿನ ಹಾಗೂ ಇತರ ಕಾಯಿಲೆಯಿರುವ 45ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮಾರ್ಚ್ 1ರಿಂದ ದೇಶಾದ್ಯಂತ 2ನೇ ಹಂತದ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ಆರೋಗ್ಯ ಕಾರ್ಯಕರ್ತರು, ಸ್ವಚ್ಚತಾ ಕರ್ಮಿಗಳು ಮೊದಲ ಸುತ್ತಿನಲ್ಲಿ ಡೋಸ್ ಗಳನ್ನು ಪಡೆದಿದ್ದರು.
A 45-year-old man in Maharashtra died yesterday, shortly after taking a second dose of the anti-Covid vaccine.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm