ಬ್ರೇಕಿಂಗ್ ನ್ಯೂಸ್
19-08-20 03:04 pm Headline Karnataka News Network ದೇಶ - ವಿದೇಶ
ಮಾಲಿ, ಆ.19: ಮಾಲಿಯಲ್ಲಿ ಬುಧವಾರ ಕ್ಷಿಪ್ರ ಕ್ರಾಂತಿ ನಡೆದು ಬಂಡುಕೋರ ಪಡೆಗಳು ಅಧ್ಯಕ್ಷರನ್ನು ಸೆರೆ ಹಿಡಿದಿವೆ. ಇದರ ಬೆನ್ನಲ್ಲೇ ದೇಶದಲ್ಲಿ ರಕ್ತಪಾತ ತಪ್ಪಿಸುವ ಸಲುವಾಗಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಇಬ್ರಾಹೀಂ ಬೌಬಕ್ಕರ್ ಕೀತಾ ಪ್ರಕಟಿಸಿದ್ದಾರೆ.
ಬಂಡುಕೋರ ಸೈನಿಕರು ಅಧ್ಯಕ್ಷ ಕೀತಾ ಹಾಗೂ ಪ್ರಧಾನಿ ಬೌಬೌ ಸಿಸ್ಸೆ ಅವರನ್ನು ಮಂಗಳವಾರ ಮಧ್ಯಾಹ್ನ ಸೆರೆ ಹಿಡಿದಿದ್ದರು. ಈ ಮೂಲಕ ಪಶ್ಚಿಮ ಆಫ್ರಿಕಾ ದೇಶದಲ್ಲಿ ಒಂದು ತಿಂಗಳ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದೆ. ಬಂಡುಕೋರ ಸೈನಿಕರು ಸೆರೆ ಹಿಡಿದ ಇಬ್ಬರು ಮುಖಂಡರನ್ನು ರಾಜಧಾನಿ ಬಮಾಕೋ ಬಳಿಯ ಕಾತಿ ನಗರದಲ್ಲಿರುವ ಸೇನಾ ನೆಲೆಗೆ ಒಯ್ಯಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಬಂಡುಕೋರರು ಸೇನಾ ನೆಲೆಯನ್ನು ಮಂಗಳವಾರ ವಶಪಡಿಸಿಕೊಂಡಿದ್ದರು.
ಅಧ್ಯಕ್ಷರ ಬಂಧನವನ್ನು ಸಂಭ್ರಮಿಸಿದ ಜನರು ನಗರದ ಕೇಂದ್ರಭಾಗದಲ್ಲಿ ಜಮಾಯಿಸಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿದರು. ಇದಕ್ಕೂ ಮುನ್ನ ಬಂಡುಕೋರ ಸೈನಿಕರು 75 ವರ್ಷ ವಯಸ್ಸಿನ ಕೀತಾ ಅವರನ್ನು ಅಧಿಕೃತ ಬಂಗಲೆಯಿಂದ ಬಂಧಿಸಿದ್ದರು.
ಸಮಾಧಾನಚಿತ್ತದಿಂದ ಇದ್ದಂತೆ ಕಂಡುಬಂದ ಕೀತಾ ಮಂಗಳವಾರ ಮಧ್ಯರಾತ್ರಿ ಸರ್ಕಾರಿ ಟೆಲಿವಿಷನ್ ಮುಂದೆ ಹಾಜರಾಗಿ ಸರ್ಕಾರ ಹಾಗೂ ರಾಷ್ಟ್ರೀಯ ಅಸೆಂಬ್ಲಿ ವಿಸರ್ಜಿಸಿರುವುದನ್ನು ಪ್ರಕಟಿಸಿದರು. ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡದೇ ಅನ್ಯ ಮಾರ್ಗವಿಲ್ಲ ಎಂದು ಘೋಷಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm