ಬ್ರೇಕಿಂಗ್ ನ್ಯೂಸ್
04-03-21 12:01 pm Headline Karnataka News Network ದೇಶ - ವಿದೇಶ
ಕಾಸರಗೋಡು, ಮಾ.4 : ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿ ಐವರು ಮೀನುಗಾರರು ಅಪಾಯದಲ್ಲಿ ಸಿಲುಕಿದ ಘಟನೆ ಬೇಕಲದ ಬಳಿ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ.
ಬುಧವಾರ ರಾತ್ರಿ ಘಟನೆ ನಡೆದಿದ್ದು, ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಭಾಗಗೊಂಡಿದ್ದು, ಬೋಟಿನ ಒಂದು ಭಾಗವನ್ನು ಮೀನುಗಾರರು ಹಿಡಿದುಕೊಂಡು ಜೀವನ್ಮರಣ ಹೋರಾಟ ನಡೆಸಿದ್ದಾರೆ.

ಈ ಬಗ್ಗೆ ಕರಾವಳಿ ರಕ್ಷಣಾ ಸಿಬಂದಿ ಮಾಹಿತಿ ಪಡೆದು ದೌಡಾಯಿಸಿದ್ದು ಐವರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ. ಎರಡು ದಿನಗಳ ಹಿಂದೆ ನೀಲೇಶ್ವರ ಆಯಿತ್ತಲದಿಂದ ಮರಿಯ ಎಂಬ ಹೆಸರಿನ ಈ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಬೋಟ್ ನಲ್ಲಿದ್ದವರು ತಿರುವನಂತಪುರ ನಿವಾಸಿಗಳೆಂದು ತಿಳಿದುಬಂದಿದೆ.
ದುರಂತಕ್ಕೀಡಾದ ಬಳಿಕ ಮೀನುಗಾರರು ಎರಡು ಗಂಟೆಗಳ ಕಾಲ ಸಮುದ್ರ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಬೋಟಿನಲ್ಲಿದ್ದ ಶ್ಯಾಮ್ (18), ಜಿಮ್ಮಿ (21), ಕುಮಾರ್ (43), ಈಶ್ವರ್ (58), ದಾಯಿ ರೋಸ್ (37) ಅವರನ್ನು ರಕ್ಷಿಸಿ ತಡರಾತ್ರಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.
After a fishing boat capsized due to strong waves, five fishermen were facing danger to their lives at deep-sea at Bekal in Kasargod.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm