ಬ್ರೇಕಿಂಗ್ ನ್ಯೂಸ್
07-03-21 06:17 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.7: ದಕ್ಷಿಣ ಭಾರತದ ಪ್ರಮುಖ ಜುವೆಲ್ಲರಿ ಕಂಪನಿಗೆ ಸೇರಿದ 27ಕ್ಕೂ ಹೆಚ್ಚು ಕಚೇರಿ ಮತ್ತು ಮಳಿಗೆಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದು ಸಾವಿರ ಕೋಟಿಗೂ ಹೆಚ್ಚು ಅಕ್ರಮ ಸಂಪತ್ತನ್ನು ಪತ್ತೆ ಮಾಡಿದ್ದಾರೆ.
ತಮಿಳುನಾಡು ಒಂದರಲ್ಲೇ ಕಂಪನಿಗೆ ಸೇರಿದ 22 ಕಡೆಗಳಲ್ಲಿ ದಾಳಿ ನಡೆದಿದ್ದರೆ, ಮುಂಬೈ, ಜೈಪುರ, ತ್ರಿಶ್ಶೂರ್ ನಲ್ಲಿಯೂ ದಾಳಿ ನಡೆದಿದೆ. ತಮಿಳುನಾಡಿನಲ್ಲಿ ಭಾರೀ ಪ್ರಮಾಣದ ಅನಧಿಕೃತ ಆಸ್ತಿಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಚೆನ್ನೈ, ತಿರುಚಿರಾಪಳ್ಳಿ, ನೆಲ್ಲೂರು, ಮದುರೈ, ಕೊಯಂಬತ್ತೂರು ಹೀಗೆ ವಿವಿಧ ಕಡೆ ದಾಳಿ ನಡೆದಿತ್ತು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಐಟಿ ದಾಳಿ ನಡೆದು, ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದು ರಾಜಕೀಯ ಪಕ್ಷಗಳನ್ನು ಚಿಂತೆಗೀಡು ಮಾಡಿದೆ. ನಗದು ಮೂಲಕ ಅನಧಿಕೃತ ಆಸ್ತಿ ಪತ್ರಗಳನ್ನು ಹೊಂದಿರುವುದು, ನೋಟು ಬ್ಯಾನ್ ಸಂದರ್ಭದಲ್ಲಿ ಭಾರೀ ಅಕ್ರಮ ವಹಿವಾಟು ನಡೆಸಿರುವುದು ದಾಳಿ ವೇಳೆ ಪತ್ತೆಯಾಗಿದೆ.
ಲೆಕ್ಕಪತ್ರಗಳಿಲ್ಲದ ನಗದು ವ್ಯವಹಾರ, ನೋಟು ಬ್ಯಾನ್ ಸಂದರ್ಭದಲ್ಲಿ ಮಾಡಲಾದ ಠೇವಣಿಗಳು, ಅಕ್ರಮ ವಹಿವಾಟು ನಡೆಸಿರುವ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ದಾಳಿಗೆ ಒಳಗಾದ ಜುವೆಲ್ಲರಿ ಕಂಪನಿಯ ಹೆಸರನ್ನು ಅಧಿಕಾರಿಗಳು ದೃಢಪಡಿಸಿಲ್ಲ. ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಐಟಿ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm