ಬ್ರೇಕಿಂಗ್ ನ್ಯೂಸ್
07-03-21 06:17 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.7: ದಕ್ಷಿಣ ಭಾರತದ ಪ್ರಮುಖ ಜುವೆಲ್ಲರಿ ಕಂಪನಿಗೆ ಸೇರಿದ 27ಕ್ಕೂ ಹೆಚ್ಚು ಕಚೇರಿ ಮತ್ತು ಮಳಿಗೆಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದು ಸಾವಿರ ಕೋಟಿಗೂ ಹೆಚ್ಚು ಅಕ್ರಮ ಸಂಪತ್ತನ್ನು ಪತ್ತೆ ಮಾಡಿದ್ದಾರೆ.
ತಮಿಳುನಾಡು ಒಂದರಲ್ಲೇ ಕಂಪನಿಗೆ ಸೇರಿದ 22 ಕಡೆಗಳಲ್ಲಿ ದಾಳಿ ನಡೆದಿದ್ದರೆ, ಮುಂಬೈ, ಜೈಪುರ, ತ್ರಿಶ್ಶೂರ್ ನಲ್ಲಿಯೂ ದಾಳಿ ನಡೆದಿದೆ. ತಮಿಳುನಾಡಿನಲ್ಲಿ ಭಾರೀ ಪ್ರಮಾಣದ ಅನಧಿಕೃತ ಆಸ್ತಿಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಚೆನ್ನೈ, ತಿರುಚಿರಾಪಳ್ಳಿ, ನೆಲ್ಲೂರು, ಮದುರೈ, ಕೊಯಂಬತ್ತೂರು ಹೀಗೆ ವಿವಿಧ ಕಡೆ ದಾಳಿ ನಡೆದಿತ್ತು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಐಟಿ ದಾಳಿ ನಡೆದು, ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದು ರಾಜಕೀಯ ಪಕ್ಷಗಳನ್ನು ಚಿಂತೆಗೀಡು ಮಾಡಿದೆ. ನಗದು ಮೂಲಕ ಅನಧಿಕೃತ ಆಸ್ತಿ ಪತ್ರಗಳನ್ನು ಹೊಂದಿರುವುದು, ನೋಟು ಬ್ಯಾನ್ ಸಂದರ್ಭದಲ್ಲಿ ಭಾರೀ ಅಕ್ರಮ ವಹಿವಾಟು ನಡೆಸಿರುವುದು ದಾಳಿ ವೇಳೆ ಪತ್ತೆಯಾಗಿದೆ.
ಲೆಕ್ಕಪತ್ರಗಳಿಲ್ಲದ ನಗದು ವ್ಯವಹಾರ, ನೋಟು ಬ್ಯಾನ್ ಸಂದರ್ಭದಲ್ಲಿ ಮಾಡಲಾದ ಠೇವಣಿಗಳು, ಅಕ್ರಮ ವಹಿವಾಟು ನಡೆಸಿರುವ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ದಾಳಿಗೆ ಒಳಗಾದ ಜುವೆಲ್ಲರಿ ಕಂಪನಿಯ ಹೆಸರನ್ನು ಅಧಿಕಾರಿಗಳು ದೃಢಪಡಿಸಿಲ್ಲ. ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಐಟಿ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm