ಬ್ರೇಕಿಂಗ್ ನ್ಯೂಸ್
09-03-21 05:54 pm Headline Karnataka News Network ದೇಶ - ವಿದೇಶ
ದಮ್ಮಾಮ್, ಮಾ.9: ಇರಾನ್ ಪ್ರೇರಿತ ಯೆಮೆನ್ ಬಂಡುಕೋರರು ಸೌದಿ ಅರೇಬಿಯಾದ ಎರಡು ಅತಿದೊಡ್ಡ ಪೆಟ್ರೋಲಿಯಂ ಸ್ಥಾವರಗಳನ್ನು ಗುರಿಯಾಗಿರಿಸಿ ಮಿಸೈಲ್ ದಾಳಿ ನಡೆಸಿದ್ದಾರೆ. ಡ್ರೋಣ್ ಮೂಲಕ ದಾಳಿ ಆಗಿರುವುದನ್ನು ಸೌದಿ ಅರೇಬಿಯಾ ಸರಕಾರ ದೃಢಪಡಿಸಿದೆ. ದಮ್ಮಾಮ್ ಬಳಿಯಿರುವ ರಾಸ್ ತನುರಾ ಪೋರ್ಟ್ ಮತ್ತು ಡಹ್ರಾನ್ ಸ್ಥಾವರ ಜಗತ್ತಿನ ಅತಿ ದೊಡ್ಡ ಪೆಟ್ರೋಲಿಯಂ ಸ್ಥಾವರಗಳಲ್ಲಿ ಒಂದಾಗಿದ್ದು ಆದಿತ್ಯವಾರ ಅದರ ಮೇಲೆ ಬಾಂಬ್ ದಾಳಿ ನಡೆದಿದೆ.

ಸಮುದ್ರ ಪ್ರದೇಶದಿಂದ ಮಿಸೈಲ್ ಮತ್ತು ಡ್ರೋಣ್ ದಾಳಿ ಮಾಡಿದ್ದು ಅದನ್ನು ತಡೆದಿದ್ದೇವೆ ಎಂದು ಸೌದಿ ಅರೇಬಿಯಾ ಸಚಿವಾಲಯ ಹೇಳಿಕೊಂಡಿದೆ. ಡಹ್ರಾನ್ ಸಿಟಿಯಲ್ಲಿರುವ ಆರಾಮ್ಕೋ ತೈಲ ಸ್ಥಾವರ ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ದಾಳಿ ಘಟನೆಯಲ್ಲಿ ಯಾವುದೇ ಸಾವು – ನೋವು ಆಗಿಲ್ಲ ಎಂದು ಸಚಿವಾಲಯದ ಅಧಿಕಾರಿಗಳು ದೃಢಪಡಿಸಿದ್ದಾರೆ.

ಇರಾನ್ ಪ್ರೇರಿತ ಯೆಮೆನ್ ಪ್ರಾಂತದ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನಡುವಿನ ಸಂಘರ್ಷ ಹಲವು ವರ್ಷಗಳಿಂದ ನಡೆಯುತ್ತಿದೆ. ಇತ್ತೀಚೆಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಯೆಮೆನ್ ಬಂಡುಕೋರರ ಸಂಘರ್ಷ ಕೊನೆಗಾಣಿಸುವ ಮಾತನ್ನಾಡಿದ್ದರು. ಮಾತುಕತೆ ಮೂಲಕ ಸುದೀರ್ಘ ಕಾಲದ ಸಮರವನ್ನು ಕೊನೆಗಾಣಿಸುವುದಾಗಿ ಹೇಳಿದ್ದರು. ಸೌದಿ ಅರೇಬಿಯಾಗೆ ಅಮೆರಿಕದ ಮಿಲಿಟರಿ ಬೆಂಬಲ ಇದ್ದು, ಯೆಮನ್ ವಿರುದ್ಧ ದಾಳಿ ನಡೆಸಲು ನೆರವು ನೀಡಿತ್ತು. ಆದರೆ, ಬೈಡನ್ ಅಧಿಕಾರಕ್ಕೆ ಬಂದ ಬಳಿಕ ಮಿಲಿಟರಿ ಬೆಂಬಲವನ್ನು ಹಿಂತೆಗೆಯುವ ಮಾತನ್ನಾಡಿದ್ದರು.

ಇದೇ ವೇಳೆ, ಯೆಮೆನ್ ಪ್ರಾಂತದ ಹೌತಿ ಬಂಡುಕೋರರ ಪರವಾಗಿ ಅದರ ಬ್ರಿಗೇಡಿಯರ್ ಒಬ್ಬ ಹೇಳಿಕೆ ಬಿಡುಗಡೆ ಮಾಡಿದ್ದು, ಜಗತ್ತಿನ ಅತಿ ದೊಡ್ಡ ತೈಲ ಸ್ಥಾವರಕ್ಕೆ 14 ಡ್ರೋಣ್ ಮತ್ತು ಎಂಟು ಮಿಸೈಲ್ ದಾಳಿ ನಡೆಸಲಾಗಿದೆ ಎಂದಿದ್ದಾನೆ. ದಾಳಿಯಿಂದ ದೊಡ್ಡ ಹಾನಿ ಆಗಿದ್ದಾದರೆ, ತೈಲ ಬೆಲೆ ಭವಿಷ್ಯದಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ಭಾರತಕ್ಕೂ ತೈಲವನ್ನು ಇರಾನ್ ಮತ್ತು ಸೌದಿಯಿಂದ ಆಮದು ಮಾಡಲಾಗುತ್ತಿದೆ.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am