ಬ್ರೇಕಿಂಗ್ ನ್ಯೂಸ್
10-03-21 02:03 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಮಾ.10: ತ್ರಿವೇಂದ್ರ ಸಿಂಗ್ ರಾವತ್ ರಾಜಿನಾಮೆಯಿಂದ ತೆರವಾಗಿದ್ದ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಂಸದ ತೀರತ್ ಸಿಂಗ್ ರಾವತ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
2013ರಿಂದ 2015ರ ವರೆಗೆ ಉತ್ತರಾಖಂಡದ ಬಿಜೆಪಿ ಅಧ್ಯಕ್ಷರಾಗಿದ್ದ ತೀರತ್ ಸಿಂಗ್ ಈ ಹಿಂದೆ ಶಾಸಕರಾಗಿದ್ದರು. 2019ರಲ್ಲಿ ಗರ್ವಾಲ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ರಾಜ್ಯದ ಸಚಿವ ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್, ಭಗತ್ ಸಿಂಗ್ ಕೋಶ್ರಿಯಾಲ್ ಸೇರಿದಂತೆ ಡಜನ್ ಗೂ ಹೆಚ್ಚು ಮಂದಿ ಆಕಾಂಕ್ಷಿಯಾಗಿದ್ದರು.


ಬಿಜೆಪಿ ದೆಹಲಿ ಮಟ್ಟದ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ತೀರತ್ ಸಿಂಗ್ ಅವರನ್ನು ಆಯ್ಕೆ ಮಾಡಿದ್ದಾರೆ. ತೀರತ್, ಇಂದು ಸಂಜೆ ನಾಲ್ಕು ಗಂಟೆಗೆ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 69 ವರ್ಷದ ಹಿರಿಯ ಸಚಿವರಾಗಿರುವ ಸತ್ಪಾಲ್ ಮಹಾರಾಜ್, ಕಾಂಗ್ರೆಸಿನಲ್ಲಿದ್ದು 2014ರಲ್ಲಿ ಹರೀಶ್ ರಾವತ್ ಮುಖ್ಯಮಂತ್ರಿಯಾಗಿದ್ದಕ್ಕೆ ಮುನಿಸಿಕೊಂಡು ಬಿಜೆಪಿ ಸೇರಿದ್ದರು. ಈ ಬಾರಿ ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯೂ ಆಗಿದ್ದರು. ಆಧ್ಯಾತ್ಮ ಗುರುವಿನ ನೆಲೆಯಲ್ಲಿ ಉತ್ತರ ಭಾರತದಲ್ಲಿ ಭಾರೀ ಪ್ರಸಿದ್ಧಿಯನ್ನೂ ಹೊಂದಿದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್ ಅವರಿಗೆ ಮಣೆ ಹಾಕದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸ್ಥಾನ ನೀಡಿದೆ.
Read: ಉತ್ತರಾಖಂಡ ಬಿಜೆಪಿ ಸರಕಾರದಲ್ಲಿ ಸಿಎಂ ಬದಲಾವಣೆ ಪರ್ವ ; ರಾವತ್ ರಾಜಿನಾಮೆ
Trivendra Singh Rawat resigned as the Uttarakhand chief minister on Tuesday amid calls for a change in leadership. BJP legislature party in a meeting in Dehradun today picked Tirath Singh Rawat to be his successor.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm