ಬ್ರೇಕಿಂಗ್ ನ್ಯೂಸ್
13-03-21 12:54 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾರ್ಚ್ 13: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) 2021ರ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಆಗಸ್ಟ್ 1ರಂದು ನೀಟ್ 2021 ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ. ಒಟ್ಟು 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ.
ಕಳೆದ ವರ್ಷದಂತೆಯೇ ಪೆನ್ ಮತ್ತು ಪತ್ರಿಕೆ ಬಳಸಿಯೇ ಆಫ್ಲೈನ್ ಮಾದರಿಯಲ್ಲಿ ಪರೀಕ್ಷೆ ನಡೆಸುವ ಪ್ರಸ್ತಾಪದಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. 'ನೀಟ್ (ಯುಜಿ)ಅನ್ನು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ 11 ಭಾಷೆಗಳಲ್ಲಿ ಪೆನ್ ಮತ್ತು ಪತ್ರಿಕೆ ಸ್ವರೂಪದಲ್ಲಿ ನಡೆಸಲಾಗುವುದು' ಎಂದು ಎನ್ಟಿಎ ಹೇಳಿಕೆ ತಿಳಿಸಿದೆ.
ಪರೀಕ್ಷೆ ಸಂಬಂಧಿಸಿದಂತೆ ಸಿಲಬಸ್, ವಯೋಮಾನ ಅರ್ಹತೆ ವಿವರ, ಮೀಸಲಾತಿ, ಸೀಟುಗಳು, ಶುಲ್ಕ, ಪರೀಕ್ಷೆ ನಡೆಯುವ ನಗರಗಳು, ರಾಜ್ಯವಾರು ಕೋಡ್ ಮುಂತಾದ ವಿವರಗಳು ಪರೀಕ್ಷೆಯ ಅರ್ಜಿ ಫಾರ್ಮ್ಗಳ ಸಲ್ಲಿಕೆ ಆರಂಭವಾದ ಬಳಿಕ ನೀಟ್ ವೆಬ್ಸೈಟ್ನಲ್ಲಿ ಲಭ್ಯವಾಗಲಿವೆ ಎಂದು ಹೇಳಿದೆ.

ಯಾವ ಭಾಷೆಗಳಲ್ಲಿ ಪರೀಕ್ಷೆ?
ಇಂಗ್ಲಿಷ್, ಹಿಂದಿ, ಕನ್ನಡ, ತೆಲುಗು, ತಮಿಳು, ಮರಾಠಿ, ಬಂಗಾಳಿ, ಗುಜರಾತಿ, ಒಡಿಯಾ, ಉರ್ದು ಮತ್ತು ಅಸ್ಸಾಮಿ ಭಾಷೆಗಳಲ್ಲಿ ಈ ಬಾರಿಯ ವೈದ್ಯಕೀಯ ಕೋರ್ಸ್ಗಳ ಪ್ರವೇಶ ಪರೀಕ್ಷೆ ನಡೆಯಲಿದೆ. ಆಗಸ್ಟ್ 1ರಂದು ಒಂದೇ ಅವಧಿಯಲ್ಲಿ ಪರೀಕ್ಷೆಯನ್ನು ಆಯೋಜಿಸಲಾಗುವುದು ಎಂದು ಎನ್ಟಿಎ ಮಾಹಿತಿ ನೀಡಿದೆ.
ಎರಡು ತಿಂಗಳು ವಿಳಂಬ
ಎನ್ಟಿಎದ ಪ್ರಕಟಣೆಗೆ ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಸಾಮಾನ್ಯವಾಗಿ ಜೂನ್ನಲ್ಲಿ ನೀಟ್ ಪರೀಕ್ಷೆಗಳು ನಡೆಯುತ್ತಿದ್ದವು. ಕೋವಿಡ್ ಕಾರಣದಿಂದಾಗಿ 2020ರಲ್ಲಿ ಒಂದು ತಿಂಗಳು ತಡವಾಗಿ, ಜುಲೈನಲ್ಲಿ ನಡೆದಿತ್ತು. ಆದರೆ ಈ ವರ್ಷ ಸನ್ನಿವೇಶಗಳು ಬದಲಾಗಿದ್ದರೂ ಮತ್ತಷ್ಟು ತಡವಾಗಿ ಪರೀಕ್ಷೆ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
NEET (UG) 2021 will be conducted in 11 languages, including Hindi and English through Pen and Paper mode on August 1, 2021 (Sunday).
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am