ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm