ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm