ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.

ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.

ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm