ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.

ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm