ಬ್ರೇಕಿಂಗ್ ನ್ಯೂಸ್
23-03-21 12:33 pm Headline Karnataka News Network ದೇಶ - ವಿದೇಶ
ತೆಲಂಗಾಣ,ಮಾ.22: ಸೂರ್ಯಪೇಟ್ಯಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿ ಉದ್ಘಾಟನೆಗೂ ಮೊದಲು ಭೀಕರ, ಭಯಾನಕ ಅವಘಡ ಸಂಭವಿಸಿದೆ. ಸೂರ್ಯಪೇಟ್ ಜಿಲ್ಲೆಯಲ್ಲಿ ಆಯೋಜಿಸಿದ್ದ 47ನೇ ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯ ಉದ್ಘಾಟನೆ ವೇಳೆ ಅವಘಡ ನಡೆದಿದೆ.


ಪ್ರೇಕ್ಷಕರು ತುಂಬಿ ತುಳುಕುತ್ತಿದ್ದ ಗ್ಯಾಲರಿ ದಿಢೀರ್ ಕುಸಿದು ಬಿದ್ದಿದೆ. ತಕ್ಷಣ ನೂರಾರು ಜನರು ಒಬ್ಬರ ಮೇಲೊಬ್ಬರು ಬಿದ್ದಿದ್ದು, ಸಾಕಷ್ಟು ಜನರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಕೂರಿಸಿದ್ದೇ ತಪ್ಪಾಯ್ತಾ?
ಹೌದು ಇಂತಹದ್ದೊಂದು ಆರೋಪ ಕೂಡ ಇದೀಗ ಕೇಳಿಬಂದಿದೆ. ಕಬಡ್ಡಿ ಪಂದ್ಯ ನಡೆಯುತ್ತಿದ್ದ ಗ್ಯಾಲರಿಯಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಕೂರಿಸಿದ್ದೇ ಕಾರಣ ಎನ್ನಲಾಗ್ತಿದೆ. 1500ಕ್ಕೂ ಹೆಚ್ಚು ಜನ ಗ್ಯಾಲರಿಗೆ ಹತ್ತಿದ್ದು, ಒಟ್ಟು 3 ಗ್ಯಾಲರಿ ವ್ಯವಸ್ಥೆ ಮಾಡಲಾಗಿತ್ತಾದರೂ ಈ ಪೈಕಿ 1 ಗ್ಯಾಲರಿ ಮಾತ್ರ ಕುಸಿದಿದೆ. ಕಬಡ್ಡಿ ಪಂದ್ಯಾವಳಿಗೆ ಚಾಲನೆ ಸಿಗುವ ಕೆಲವೇ ಕ್ಷಣಗಳ ಮುನ್ನ ಈ ದುರ್ಘಟನೆ ಸಂಭವಿಸಿದೆ.


ಒಟ್ನಲ್ಲಿ ಖುಷಿ ಖುಷಿಯಾಗಿ ಕಬಡ್ಡಿ ಮ್ಯಾಚ್ ನೋಡಲು ಬಂದವರು ಆಸ್ಪತ್ರೆಯಲ್ಲಿ ನರಳಾಡುವಂತಾಗಿದೆ. ಇನ್ನು ಈ ಘಟನೆ ಬಗ್ಗೆ ಪೊಲೀಸರು ಕೂಡ ತನಿಖೆ ನಡೆಸ್ತಿದ್ದಾರೆ. ಅದೇನೆ ಇರ್ಲಿ, ಸ್ಪರ್ಧೆ ಆರಂಭದಲ್ಲೇ ಸಂಭವಿಸಿರುವ ಈ ದುರ್ಘಟನೆ ಆಟಗಾರರಿಗೂ ಆಘಾತ ತಂದಿದೆ.
Telangana: Several injured after audience gallery at National Junior Kabaddi Championship in Suryapet, collapsed today evening.
— ANI (@ANI) March 22, 2021
"No deaths have been reported and injured are undergoing treatment," said Suryapet SP. pic.twitter.com/DYqhM7FGxG
A temporary gallery collapsed ahead of the 47th Junior National Kabbadi tournament in the Suryapet district of Telangana on Monday, injuring hundreds of people.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm