ಬ್ರೇಕಿಂಗ್ ನ್ಯೂಸ್
24-03-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.24: ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧವನ್ನು ಕೇಂದ್ರ ಸರಕಾರ ಎ.30ರ ವರೆಗೂ ವಿಸ್ತರಣೆ ಮಾಡಿದೆ. ಕಳೆದ 2020ರ ಮಾರ್ಚ್ ತಿಂಗಳಲ್ಲಿ ಕೋವಿಡ್ ಲಾಕ್ಡೌನ್ ಘೋಷಣೆಯಾದ ಬಳಿಕ ವಿಮಾನ ಸಂಚಾರ ನಿರ್ಬಂಧ ವಿಧಿಸಲಾಗಿತ್ತು. ಈಗ ನಿರ್ಬಂಧಕ್ಕೆ ಒಂದು ವರ್ಷ ಪೂರ್ತಿಯಾಗಿದ್ದು ಮತ್ತೆ ಮುಂದುವರಿಯುವ ಸಾಧ್ಯತೆ ಗೋಚರಿಸಿದೆ.
ಕಳೆದ ಬಾರಿ ಲಾಕ್ಡೌನ್ ಘೋಷಣೆಯ ಬಳಿಕ ಮೇ ತಿಂಗಳಲ್ಲಿ ಜಗತ್ತಿನ ಹಲವೆಡೆ ಉಳಿದುಕೊಂಡಿದ್ದ ಭಾರತೀಯರನ್ನು ಕರೆತರುವ ಸಲುವಾಗಿ ಭಾರತ ಸರಕಾರ ವಂದೇ ಭಾರತ್ ಮಿಷನ್ ಯೋಜನೆ ಹಮ್ಮಿಕೊಂಡಿತ್ತು. ಈ ಸರಣಿ ಈಗ ಹತ್ತನೇ ಆವರ್ತನದಲ್ಲಿದ್ದು ಜಗತ್ತಿನಾದ್ಯಂತ ಇರುವ ಭಾರತೀಯ ಮೂಲದವರನ್ನು ಕರೆತರುವ ಕೆಲಸ ಮಾಡುತ್ತಿದೆ. ಇದರ ನಡುವೆ, ಭಾರತ ಸರಕಾರ ಕೊಡುಕೊಳ್ಳುವ ಒಪ್ಪಂದ ಯೋಜನೆಯಡಿ 27 ದೇಶಗಳ ಜೊತೆ ಪ್ರಯಾಣಿಕ ಸಂಚಾರಕ್ಕೆ ಅನುಮತಿ ಕೊಟ್ಟಿದೆ.
ಇದರಂತೆ, ಅಫ್ಘಾನಿಸ್ತಾನ, ಬೆಹ್ರೈನ್, ಬಾಂಗ್ಲಾದೇಶ, ಭೂತಾನ್, ಕೆನಡಾ, ಇಥಿಯೋಪಿಯಾ, ಫ್ರಾನ್ಸ್, ಜರ್ಮನಿ, ಇರಾಕ್, ನೇಪಾಳ, ನೆದರ್ಲೆಂಡ್ಸ್, ನೈಜೀರಿಯಾ, ಒಮಾನ್, ಕತಾರ್, ರಷ್ಯಾ, ರವಾಂಡಾ, ಸೀಶೆಲ್ಸ್ , ತಾಂಜಾನಿಯಾ, ಯುನೈಟೆಡ್ ಕಿಂಗ್ಡಮ್, ಅಮೆರಿಕ ಮತ್ತು ಉಜ್ಬೆಕಿಸ್ತಾನದಿಂದ ನಿಗದಿತ ನೆಲೆಯಲ್ಲಿ ಪ್ರಯಾಣಿಕ ವಿಮಾನಗಳ ಸಂಚಾರ ನಡೆಯುತ್ತಿದೆ.
ಕೊರೊನಾ ಸೋಂಕು ಕಂಡುಬಂದು ವರ್ಷ ಕಳೆಯುತ್ತಿದ್ದರೂ, ಜಗತ್ತಿನಾದ್ಯಂತ ಮತ್ತಷ್ಟು ಹರಡುವ ಭೀತಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಹೊಸ ಗೈಡ್ ಲೈನ್ಸ್ ರೂಪಿಸಿದೆ. ಅದರಂತೆ, ವಿಮಾನಯಾನ ಸಚಿವಾಲಯ ವಿಮಾನ ಸಂಚಾರ ನಿರ್ಬಂಧವನ್ನು ಎಪ್ರಿಲ್ ವರೆಗೂ ವಿಸ್ತರಿಸಿ ಆದೇಶ ಮಾಡಿದೆ.
The director-general of civil aviation on Tuesday extended the suspension of international flights in India till April 30.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm