ಬ್ರೇಕಿಂಗ್ ನ್ಯೂಸ್
31-03-21 12:53 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾರ್ಚ್ 31: ಹಲವು ಜನ ಸಾಮಾನ್ಯರಿಗೆ ತಿಂಗಳಲ್ಲಿ ಒಮ್ಮೆಯಾದರೂ ಬ್ಯಾಂಕ್ ಕೆಲಸಗಳಿರುತ್ತವೆ. ಆದರೆ, ಆ ದಿನ ಬ್ಯಾಂಕ್ಗೆ ರಜೆ ಇದ್ದರೆ ಅವರ ಇತರ ಕೆಲಸಗಳಿಗೆ ತೊಂದರೆಯಾಗಬಹುದು. ಈ ಹಿನ್ನೆಲೆ ಬ್ಯಾಂಕ್ ರಜಾ ದಿನಗಳ ವಿವರಗಳನ್ನು ಮೊದಲೇ ನೋಡಿದರೆ, ತಮ್ಮ ಬ್ಯಾಂಕ್ಗಳು ಕಾರ್ಯ ನಿರ್ವಹಿಸುವ ದಿನದಲ್ಲಿ ಅವರು ತಮ್ಮ ಬ್ಯಾಂಕ್ ಶಾಖೆಗಳಿಗೆ ಹೋದರೆ ಅವರ ಕೆಲಸ ಬೇಗ ಮುಗಿಸಿಕೊಳ್ಳಬಹುದು.
ಇದೇ ರೀತಿ ಏಪ್ರಿಲ್ 2021 ರಲ್ಲೂ ಬ್ಯಾಂಕುಗಳು 15 ದಿನಗಳ ಕಾಲ ಬಂದ್ ಆಗಿರುತ್ತದೆ. ಏಪ್ರಿಲ್ ತಿಂಗಳ ಮೊದಲನೆಯ ದಿನವೂ ಸಹ ರಜಾ ದಿನವೇ ಆಗಿದೆ.
ಹೌದು, 2020-21ರ ಹಣಕಾಸು ವರ್ಷವು ಮಾರ್ಚ್ 31 ರಂದು ಕೊನೆಗೊಳ್ಳುವುದರಿಂದ, ಹಣಕಾಸಿನ ವರ್ಷದ ಕೊನೆಯ ದಿನವಾದ ಮಾರ್ಚ್ 31 ರಂದು ಗ್ರಾಹಕರಿಗೆ ಸಂಬಂಧಿಸಿದ ಕೆಲಸವನ್ನು ಮಾಡಲಾಗುವುದಿಲ್ಲ. ಏಪ್ರಿಲ್ 1 ರಂದೂ ಸಹ ಇದೇ ರೀತಿ ಬ್ಯಾಂಕುಗಳು ತಮ್ಮ ವಾರ್ಷಿಕ ಖಾತೆಗಳನ್ನು ಕ್ಲೋಸ್ ಮಾಡುವ ದಿನವಾಗಿದ್ದು ಜನಸಾಮಾನ್ಯರ ಕೆಲಸ ನಿರ್ವಹಿಸುವುದಿಲ್ಲ. ಈ ಹಿನ್ನೆಲೆ ಜನರಿಗೆ ತೊಂದರೆಯಾಗಬಾರದೆಂದು ಆರ್ಬಿಐ ಬ್ಯಾಂಕುಗಳ ರಜಾ ದಿನಗಳ ಪಟ್ಟಿಯನ್ನು ನೀಡುತ್ತದೆ. ನಿಮಗೆ ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್ನಲ್ಲಿ ಕೆಲಸ ಇದ್ದರೆ, ಯಾವ ದಿನ ಮುಚ್ಚಲಾಗುತ್ತದೆ ಎಂಬುದನ್ನು ತಿಳಿದುಕೊಳ್ಳಲು ಈ ಪಟ್ಟಿಯನ್ನು ಪರಿಶೀಲಿಸಿ.
ಆದರೂ, ಎಲ್ಲ ಬ್ಯಾಂಕುಗಳಲ್ಲಿ ಹಾಗೂ ಎಲ್ಲ ರಾಜ್ಯಗಳಲ್ಲಿ 15 ದಿನಗಳ ಕಾಲ ರಜೆ ಇರುವುದಿಲ್ಲ. ಏಕೆಂದರೆ ಕೆಲವು ಹಬ್ಬಗಳನ್ನು ಇಡೀ ದೇಶದಲ್ಲಿ ಆಚರಿಸಲಾಗುವುದಿಲ್ಲ ಎಂಬುದನ್ನು ಬ್ಯಾಂಕ್ ಗ್ರಾಹಕರು ಗಮನಿಸಬೇಕಾಗಿದೆ.

ಬ್ಯಾಂಕ್ ರಜಾ ದಿನಗಳ ಪಟ್ಟಿ ಹೀಗಿದೆ ನೋಡಿ...

ತೆಲುಗು ಹೊಸ ವರ್ಷ, ಬಿಹು, ಗುಡಿ ಪಾಡ್ವಾ, ವೈಶಾಖ, ಬಿಜು ಉತ್ಸವ ಮತ್ತು ಯುಗಾದಿ ಹಿನ್ನೆಲೆ ಏಪ್ರಿಲ್ 13 ರಂದು ಬ್ಯಾಂಕುಗಳಿಗೆ ರಜೆ ಇರುತ್ತದೆ. ಮರುದಿನ ಅಂದರೆ ಏಪ್ರಿಲ್ 14 ರಂದು ಡಾ. ಅಂಬೇಡ್ಕರ್ ಜಯಂತಿ ಹಿನ್ನೆಲೆ ಬ್ಯಾಂಕುಗಳನ್ನು ಮುಚ್ಚಲಾಗುವುದು. ನಂತರ ಏಪ್ರಿಲ್ 15, ಹಿಮಾಚಲ ದಿನ, ವಿಶು, ಬಂಗಾಳಿ ಹೊಸ ವರ್ಷ, ಸರ್ಹುಲ್ ಹಿನ್ನೆಲೆ ಕೆಲವು ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ ನೀಡಲಾಗುವುದು. ಇದರ ನಂತರ, ಏಪ್ರಿಲ್ 21 ರಂದು ರಾಮ ನವಮಿ ಮತ್ತು ಏಪ್ರಿಲ್ 25ರಂದು ಮಹಾವೀರ ಜಯಂತಿ ಹಿನ್ನೆಲೆ ಬ್ಯಾಂಕ್ ಶಾಖೆಗಳಿಗೆ ರಜೆ ಇರುತ್ತದೆ.
ಇದರ ಜತೆಗೆ ಏಪ್ರಿಲ್ 10 ಮತ್ತು 24 ರಂದು ಬ್ಯಾಂಕುಗಳಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆ ಇದ್ದರೆ, ಏಪ್ರಿಲ್ 4, 11, 18 ಹಾಗೂ 25 ರಂದು ಭಾನುವಾರ ಎಂದಿನಂತೆ ರಜೆ ಇದೆ.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am