ಬ್ರೇಕಿಂಗ್ ನ್ಯೂಸ್
05-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 5: ಭಾರತದಲ್ಲಿ ಮತ್ತೆ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ 1,03,558 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 478 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ ವರ್ಷ ಕೊರೊನಾ ಆರ್ಭಟ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾದ ದಿನನಿತ್ಯದ ಕೊರೊನಾ ಪ್ರಕರಣ ಇದಾಗಿದೆ. ಕಳೆದ ಸೆಪ್ಟೆಂಬರ್ 16ರಂದು 97,894 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಆನಂತರ ಅತಿ ಹೆಚ್ಚು ದಾಖಲಾದ ಕೊರೊನಾ ಪ್ರಕರಣ ಭಾನುವಾರದ್ದಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ನಲ್ಲಿ ಈ ಕುರಿತು ಮಾಹಿತಿ ನೀಡಿದೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830 ಆಗಿದೆ.

ಕಳೆದ 24 ಗಂಟೆಯಲ್ಲಿ 478 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 1,65,101 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಭಾನುವಾರ 52,847 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,16,82,136 ಆಗಿದೆ. ಭಾರತದಲ್ಲಿ ಏಪ್ರಿಲ್ 4ರ ತನಕ 7,91,05,163 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.
ಭಾನುವಾರ ಗುಜರಾತ್ ನಲ್ಲಿ 2875, ರಾಜಸ್ಥಾನದಲ್ಲಿ 1729, ತಮಿಳುನಾಡಿನಲ್ಲಿ 3581 ಹಾಗೂ ಕರ್ನಾಟಕದಲ್ಲಿ 4553 ಮಂದಿಗೆ ಕೊರೊನಾ ಸೋಂಕು ತಗುಲಿತ್ತು.
The coronavirus situation in India remained grim on Sunday as over 1 lakh new infections were recorded, the highest single-day rise since the pandemic began.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm