ಬ್ರೇಕಿಂಗ್ ನ್ಯೂಸ್
07-04-21 05:48 pm Headline Karnataka News Network ದೇಶ - ವಿದೇಶ
ಬ್ರೆಜಿಲ್,ಎ.7: ಜಗತ್ತಿನಾದ್ಯಂತ ಕೊರೊನಾ ಸೋಂಕು ಮತ್ತೊಮ್ಮೆ ತನ್ನ ಉಗ್ರ ಸ್ವರೂಪವನ್ನ ಪ್ರದರ್ಶಿಸುತ್ತಿದೆ. ಕೆಲವು ದೇಶಗಳಲ್ಲಿ ಕೊರೊನಾದ ಎರಡನೇ ಅಲೆ ಪ್ರಾರಂಭವಾಗಿದ್ದರೆ ಇನ್ನೂ ಕೆಲವು ದೇಶಗಳಲ್ಲಿ ಈಗಾಗಲೇ ಮೂರು ಮತ್ತು ನಾಲ್ಕನೇ ಕೊರೊನಾ ಅಲೆಗೆ ತತ್ತರಿಸುತ್ತಿವೆ. ಈ ಪೈಕಿ ಬ್ರೆಜಿಲ್ ಕೂಡ ಒಂದು.
ಬ್ರೆಜಿಲ್ನಲ್ಲಿ ಕಳೆದ 24 ಗಂಟೆಗಳಲ್ಲಿ 4 ಸಾವಿರಕ್ಕೂ ಹೆಚ್ಚು ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬ್ರೆಜಿಲ್ನಲ್ಲಿ ಇಷ್ಟು ಮಂದಿ ಸೋಂಕಿನಿಂದ ಒಂದೇ ದಿನಕ್ಕೆ ಸಾವನ್ನಪ್ಪಿರುವುದು ಇದೇ ಮೊದಲು. ಈ ಮೂಲಕ ಈವರೆಗೆ ಬ್ರೆಜಿಲ್ನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3,37,364ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಹೆಚ್ಚು ಜನರು ಬಲಿಯಾದ ದೇಶಗಳ ಪೈಕಿ ಬ್ರೆಜಿಲ್ ಈಗ ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಯುನೈಟೆಡ್ ಸ್ಟೇಟ್ಸ್ ಇದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಬ್ರೆಜಿಲ್ನ ಎಪಿಡೆಮಿಯೊಲೊಜಿಸ್ಟ್ ಎಥೆಲ್ ಮೆಸಿಯೆಲ್.. ನಮ್ಮಿಂದ ದೇಶದ 10 ಪರ್ಸೆಂಟ್ ಜನರಿಗಷ್ಟೇ ಈವರೆಗೆ ವ್ಯಾಕ್ಸಿನ್ ನೀಡಲಾಗಿದೆ. ಇಷ್ಟು ವೇಗವಾಗಿ ಹರಡುತ್ತಿರುವ ಸೋಂಕನ್ನು ತಡೆಹಿಡಿಯಲು ಇರುವ ಏಕೈಕ ಮಾರ್ಗ ಕನಿಷ್ಟ 20 ದಿನಗಳ ಕಾಲ ಲಾಕ್ಡೌನ್ ಮಾಡುವುದು ಎಂದು ಹೇಳಿದ್ದಾರೆ.
ಅಲ್ಲದೇ ದುರಾದೃಷ್ಟಕರ ವಿಚಾರ ಎಂದರೆ ಇಲ್ಲಿನ ರಾಜಕೀಯ ನಮ್ಮನ್ನು ಇಂದು ಈ ಸ್ಥಿತಿಗೆ ತಂದು ನಿಲ್ಲಿಸಿದೆ. ಇಷ್ಟೊಂದು ಮಂದಿ ಸಾವನ್ನಪ್ಪಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಮರುಗಿದ್ದಾರೆ. ವರ್ಲ್ಡ್ಡೋಮೀಟರ್ ಪ್ರಕಾರ ಜಗತ್ತಿನಾದ್ಯಂತ ಅತಿಹೆಚ್ಚು ಸೋಂಕಿತರನ್ನ ಹೊಂದಿದ ದೇಶಗಳ ಪಟ್ಟಿಯಲ್ಲೂ ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಇಲ್ಲಿವರೆಗೆ ಬ್ರೆಜಿಲ್ನಲ್ಲಿ 1,31,06,058 ಜನರು ಸೋಂಕಿಗೊಳಗಾಗಿದ್ದಾರೆ. ಸೋಂಕಿನಿಂದ 3,37,364 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 1,15,58,784 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ ಸಕ್ರಿಯ ಸೋಂಕಿತರ ಸಂಖ್ಯೆ 12,09,910 ಕ್ಕೆ ಏರಿದೆ.
For the first time since the start of the COVID-19 pandemic, Brazil has recorded more than 4,000 coronavirus deaths in a single day, a new grim milestone for the country as President Jair Bolsonaro continues to reject public health restrictions
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm