ಬ್ರೇಕಿಂಗ್ ನ್ಯೂಸ್
10-04-21 01:39 pm Headline Karnataka News Network ದೇಶ - ವಿದೇಶ
ಕಾಸರಗೋಡು, ಏ.10 : ಬ್ಯಾಂಕ್ ಮ್ಯಾನೇಜರ್ ಆಗಿರುವ ಮಹಿಳೆಯೊಬ್ಬರು ತಮ್ಮ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಕಣ್ಣೂರು ಜಿಲ್ಲೆಯ ಕೂತುಪರಂಬದಲ್ಲಿ ನಡೆದಿದೆ.
ಕೆನರಾ ಬ್ಯಾಂಕ್ ಕೂತುಪರಂಬ ಶಾಖೆಯ ಕಚೇರಿಯಲ್ಲಿ ಘಟನೆ ನಡೆದಿದೆ. ಮೃತ ಬ್ಯಾಂಕ್ ಮ್ಯಾನೇಜರ್ ಅನ್ನು ತ್ರಿಶ್ಶೂರ್ ಮೂಲದ ಕೆ.ಎಸ್ ಸ್ವಪ್ನಾ (40) ಎಂದು ಗುರುತಿಸಲಾಗಿದೆ. ಬ್ಯಾಂಕ್ ನೌಕರರು ಎಂದಿನಂತೆ ಶುಕ್ರವಾರ ಬೆಳಗ್ಗೆ 8.45 ರ ವೇಳೆಗೆ ಬ್ಯಾಂಕ್ಗೆ ಆಗಮಿಸಿದಾಗ ಸ್ವಪ್ನಾ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಜೀವ ಉಳಿಸಲಾಗಲಿಲ್ಲ.

ಬ್ಯಾಂಕ್ ವ್ಯವಸ್ಥಾಪಕಿ ಆತ್ಮಹತ್ಯೆಗೆ ಶರಣಾದ ಪ್ರಕರಣದ ಕುರಿತು ಕೂತುಪರಂಬ ಎಸಿಪಿ ಕೆ.ಜಿ. ಸುರೇಶ್ ಕುಮಾರ್ ಮತ್ತು ಎಸ್ಐ ಕೆ.ಟಿ. ಸಂದೀಪ್ ನೇತೃತ್ವದ ಪೊಲೀಸ್ ತಂಡ ಬ್ಯಾಂಕ್ ಪರಿಶೀಲನೆ ನಡೆಸಿದ್ದು ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದೆ.
ಸಿಸಿಟಿವಿ ದೃಶ್ಯಾವಳಿಯಂತೆ ಸ್ವಪ್ನಾ ಬೆಳಗ್ಗೆ 8.10 ರ ವೇಳೆಗೆ ಕಚೇರಿ ತಲುಪಿ 8.17 ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರಿಗೆ ಸ್ಪಪ್ನಾ ಅವರ ಡೈರಿ ಪತ್ತೆಯಾಗಿದ್ದು, ಅದರಲ್ಲಿ ಕೆಲಸವನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯವಾಗಿಲ್ಲ ಎಂದು ಬರೆದಿದೆ. ಇದು ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಎಸ್ಐ ಕೆ ಟಿ ಸಂದೀಪ್ ಅನುಮಾನ ವ್ಯಕ್ತಪಡಿಸಿದ್ದಾರೆ.
ತ್ರಿಶೂರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸ್ವಪ್ನಾ ಭಡ್ತಿ ಪಡೆದಿದ್ದು ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ನಲ್ಲಿ ಕೂತ್ತುಪರಂಬಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇವರ ಪತಿ ಸಾಬು ಎರಡು ವರ್ಷಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಸ್ವಪ್ನಾ ಅವರ ಮಕ್ಕಳಾದ ನಿರಂಜನ್ ಮತ್ತು ನಿವೇದಿಕಾ ಇಬ್ಬರೂ ಕೇಂದ್ರಿಯ ವಿದ್ಯಾಲಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm