ಬ್ರೇಕಿಂಗ್ ನ್ಯೂಸ್
13-04-21 10:41 am Headline Karnataka News Network ದೇಶ - ವಿದೇಶ
ಮಂಗಳೂರು, ಎ.13: ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನ ಹವಾಮಾನ ವೈಪರೀತ್ಯದಿಂದಾಗಿ ತಡರಾತ್ರಿಯಲ್ಲಿ ನೇರವಾಗಿ ಕೊಚ್ಚಿಗೆ ತೆರಳಿದ್ದು ಅಲ್ಲಿ ಇಳಿದುಕೊಂಡ ಪ್ರಯಾಣಿಕರು ಪರದಾಟ ಅನುಭವಿಸಿದ್ದಾರೆ.

ರಾತ್ರಿ 12.30 ಕ್ಕೆ ವಿಮಾನ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಮಂಗಳೂರಿನಲ್ಲಿ ಭಾರೀ ಸಿಡಿಲು ಮಳೆಯಾಗಿದ್ದರಿಂದ ವಿಮಾನವನ್ನು ಇಳಿಸಲಾಗದೆ ನೇರವಾಗಿ ಕೇರಳದ ಕೊಚ್ಚಿಗೆ ತೆರಳಿತ್ತು. ರಾತ್ರಿ ಒಂದು ಗಂಟೆ ಸುಮಾರಿಗೆ ಕೊಚ್ಚಿ ತಲುಪಿದ್ದ ವಿಮಾನದಲ್ಲಿ ಸುಮಾರು 118 ಮಂದಿ ಪ್ರಯಾಣಿಕರಿದ್ದರು. ಆನಂತರ ಅರ್ಧ ಗಂಟೆಯಲ್ಲಿ ಮತ್ತೆ ವಿಮಾನವನ್ನು ಮಂಗಳೂರಿಗೆ ಹಿಂತಿರುಗಿ ಓಡಿಸಲಾಗುತ್ತದೆ ಎಂದು ಹೇಳಿ ಪ್ರಯಾಣಿಕರನ್ನು ವಿಮಾನದಲ್ಲೇ ಕುಳ್ಳಿರಿಸಲಾಗಿತ್ತು.

ಆದರೆ ಎರಡು ಗಂಟೆ ಕಳೆದರೂ ವಿಮಾನ ಹೊರಡಲಿಲ್ಲ. ಬಳಿಕ ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ ಏರ್ಪೋರ್ಟ್ ಟರ್ಮಿನಲ್ ಗೆ ಕರೆದೊಯ್ಯಲಾಯಿತು. ಅಲ್ಲಿ ಮಕ್ಕಳು, ಕುಟುಂಬಸ್ಥರು ಎಲ್ಲರನ್ನೂ ಒಂದೇ ಕಡೆ ಕೂಡಿಹಾಕಿದ್ದರು. ಕುಳಿತುಕೊಳ್ಳುವುದಕ್ಕೂ ವ್ಯವಸ್ಥೆ ಇರಲಿಲ್ಲ. ಅಲ್ಲದೆ, ನೀರು ಕೊಡುವ ವ್ಯವಸ್ಥೆಯನ್ನೂ ಮಾಡಲಿಲ್ಲ. ನಾವು ಇಲ್ಲಿಂದಲೇ ರಸ್ತೆ ದಾರಿಯಾಗಿ ಹೋಗುತ್ತೇವೆ ಎಂದು ಗೋಗರೆದರೂ ಅಲ್ಲಿನ ಅಧಿಕಾರಿಗಳು ಹೊರಗೆ ಬಿಡಲಿಲ್ಲ. ಬೆಳಗ್ಗೆ 9.30 ರ ವರೆಗೂ ನಾವು ಇಲ್ಲೇ ಇದ್ದೇವೆ. ಚಹಾ, ನೀರು, ಯಾವುದೂ ಇಲ್ಲದೆ ಮಕ್ಕಳು, ತಾಯಂದಿರು ಸಂಕಟ ಪಟ್ಟಿದ್ದಾರೆ ಎಂದು ಮಡಿಕೇರಿ ಮೂಲದ ಪ್ರಯಾಣಿಕ ಅಬು ತಾಹಿರ್ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ರಾತ್ರಿ ಒಂದು ವಿಮಾನ ಇಳಿಸಿ ಹೋದ ಪೈಲಟ್ ಮತ್ತೆ ಬಂದಿರಲಿಲ್ಲ. ಈಗ ಬೆಳಗ್ಗೆ 9.30 ಕ್ಕೆ ಅದೇ ಪೈಲಟ್ ಬಂದಿದ್ದಾರೆ. ನಮ್ಮನ್ನು ಯಾಕೆ ಸತಾಯಿಸಿದ್ದಾರೆ ಏರ್ ಇಂಡಿಯಾ ಅಧಿಕಾರಿಗಳು. ನಾವು ಇಳಿದು ಹೋಗುತ್ತಿದ್ದರೂ, ಈಗ ಮಂಗಳೂರು ತಲುಪುತ್ತಿದ್ದೆವು. ತುಂಬ ಅರ್ಜೆಂಟಲ್ಲಿ ಬಂದವರಿದ್ದರು. ಬಜ್ಪೆ ಬಳಿಯ ಒಬ್ಬರು ತಂದೆ ತೀರಿಕೊಂಡಿದ್ದರೆಂದು ಅರ್ಜೆಂಟಾಗಿ ಬಂದಿದ್ದರು. ಇವರನ್ನೆಲ್ಲ ಏರ್ ಇಂಡಿಯಾ ಅಧಿಕಾರಿಗಳು ಸತಾಯಿಸಿದ್ದಾರೆ ಎಂದು ಹೇಳಿದರು ತಾಹಿರ್.

ಇವರಿಗೆ ಕಣ್ಣೂರು ಅಥವಾ ಕೋಯಿಕ್ಕೋಡ್ ಏರ್ಪೋರ್ಟ್ ನಲ್ಲಿ ಇಳಿಸಬಹುದಿತ್ತು. ಕೊಚ್ಚಿಗೆ ಒಯ್ದು ಲ್ಯಾಂಡ್ ಮಾಡಿದ್ದಾರೆ.
ಈಗ ಹತ್ತು ಗಂಟೆ ವೇಳೆಗೆ ವಿಮಾನ ಮತ್ತೆ ಮಂಗಳೂರಿಗೆ ಹೊರಡಲಿದೆ ಎನ್ನುತ್ತಿದ್ದಾರೆ. ನಾವು ಮತ್ತೆ ವಿಮಾನದಲ್ಲಿ ಕುಳಿತಿದ್ದೇವೆ. ಇನ್ನೂ ಟೇಕ್ ಆಫ್ ಆಗಿಲ್ಲ ಎಂದು ಬೆಳಗ್ಗೆ 10 ಗಂಟೆ ಸುಮಾರಿಗೆ ತಾಹಿರ್ ಕರೆ ಮಾಡಿ ಅಲವತ್ತುಕೊಂಡರು.
Dubai flight air India that was supposed to land in Mangalore has ended up landing in Cochi International airport due to heavy rains, thunderstorms and lightening causing trouble for passengers whole night.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm