ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.

ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.

ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm