ಬ್ರೇಕಿಂಗ್ ನ್ಯೂಸ್
17-04-21 12:52 pm Headline Karnataka News Network ದೇಶ - ವಿದೇಶ
ಹರಿದ್ವಾರ, ಏಪ್ರಿಲ್ 17: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ಹಲವು ಸಾಧುಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಕುಂಭಮೇಳ ಈಗ ಸಾಂಕೇತಿಕವಾಗಿರಬೇಕಿದೆ. ಇದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಸ್ವಾಮಿ ಅವದೇಶಾನಂದ ಗಿರಿ ಅವರೊಂದಿಗೆ ಮಾತನಾಡಿದ ನಂತರ ಮೋದಿ ಟ್ವೀಟ್ ಮಾಡಿದ್ದಾರೆ. ಶುಕ್ರವಾರ ಕುಂಭಮೇಳದಲ್ಲಿ ಭಾಗವಹಿಸಿದ್ದ 30 ಸಾಧುಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಇಬ್ಬರು ಮಹಾಮಂಡಲೇಶ್ವರ (ಮುಖ್ಯ ಸಾಧುಗಳು) ಸೋಂಕಿನಿಂದಾಗಿ ಮೃತಪಟ್ಟಿದ್ದರು.
ಕುಂಭಮೇಳದಲ್ಲಿ ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ, "ಫೋನ್ ನಲ್ಲಿ ಸ್ವಾಮಿ ಅವದೇಶಾನಂದ ಗಿರಿ ಜೀ ಅವರೊಂದಿಗೆ ಮಾತನಾಡಿದೆ. ಎಲ್ಲಾ ಸಾಧುಗಳ ಆರೋಗ್ಯದ ಕುರಿತು ವಿಚಾರಿಸಿದ್ದೇನೆ. ಸಾಧುಗಳ ಆರೋಗ್ಯ ಸುಧಾರಣೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ" ಎಂದು ಹೇಳಿದ್ದಾರೆ. ಸದ್ಯಕ್ಕೆ ಕುಂಭಮೇಳದಲ್ಲಿ ಎರಡು ಪವಿತ್ರ ಸ್ನಾನಗಳು ಸಂಪನ್ನವಾಗಿವೆ. ಇದೀಗ ದೇಶದಲ್ಲಿ ಕೊರೊನಾ ಸೋಂಕು ಮಿತಿ ಮೀರುತ್ತಿರುವುದರಿಂದ ಹಾಗೂ ಕುಂಭಮೇಳದಲ್ಲಿಯೂ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಕಾರಣ ಕುಂಭಮೇಳವನ್ನು ಸಾಂಕೇತಿಕವಾಗಿ ನಡೆಸಬೇಕೆಂದು ಎಲ್ಲರಲ್ಲಿಯೂ ಮನವಿ ಮಾಡುತ್ತಿದ್ದೇನೆ. ಇದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಬಲ ನೀಡಲಿದೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮಾಡಿದ ನಂತರ ಕುಂಭಮೇಳಕ್ಕೆ ಬರದಂತೆ ಅವದೇಶಾನಂದ ಸ್ವಾಮೀಜಿ ಕೂಡ ಮನವಿ ಮಾಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪವಿತ್ರ ಸ್ನಾನದಲ್ಲಿ ಭಾಗವಹಿಸದಂತೆ ಕೇಳಿಕೊಂಡಿದ್ದಾರೆ.
ಕುಂಭಮೇಳ ಆರಂಭವಾದ ನಂತರ ವಾರದಲ್ಲಿ ಹರಿದ್ವಾರದಲ್ಲಿ ಸುಮಾರು 2000 ಕೊರೊನಾ ಪ್ರಕರಣಗಳು ದಾಖಲಾಗಿವೆ. ಪವಿತ್ರ ಸ್ನಾನದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಭಕ್ತಾದಿಗಳು ಕೊರೊನಾ ನಿಯಮಾವಳಿಗಳನ್ನು ಪಾಲಿಸದಿರುವುದೂ ಕಂಡುಬಂದಿದೆ.
ಕೊರೊನಾ ಹಾಟ್ ಸ್ಪಾಟ್ ಆಗ್ತಿದ್ಯಾ ಕುಂಭಮೇಳ ! 1700 ಜನಕ್ಕೆ ಪಾಸಿಟಿವ್ !
ಕರ್ನಾಟಕದಿಂದ ಕುಂಭಮೇಳಕ್ಕೆ ಹೋಗಿ ಬಂದವರಿಗೆ ಕೊವಿಡ್ ಟೆಸ್ಟ್ ಕಡ್ಡಾಯ; ಆರೋಗ್ಯ ಸಚಿವ ಡಾ.ಸುಧಾಕರ್
मैंने प्रार्थना की है कि दो शाही स्नान हो चुके हैं और अब कुंभ को कोरोना के संकट के चलते प्रतीकात्मक ही रखा जाए। इससे इस संकट से लड़ाई को एक ताकत मिलेगी। @AvdheshanandG
— Narendra Modi (@narendramodi) April 17, 2021
As COVID-19 cases in the country topped over 2.3 lakh cases on Saturday, Prime Minister Narendra Modi sought a curtailment of the Kumbh Mela underway in Haridwar, suggesting to ‘akharas’ (congregations of Hindu seers) that the event be concluded with symbolic rituals.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 06:36 pm
Mangalore Correspondent
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm