ಬ್ರೇಕಿಂಗ್ ನ್ಯೂಸ್
17-04-21 09:53 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.17: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ನಗರ ಪ್ರದೇಶಗಳಲ್ಲಿ ಹೊಸ ರೀತಿಯ ನಿಯಂತ್ರಣ ಕ್ರಮಗಳನ್ನು ಜಾರಿಗೆ ತಂದಿದೆ. ನಗರ ಪ್ರದೇಶಗಳಿಗೆ ಬರುವ ಮಂದಿ ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಅಥವಾ ಕೋವಿಡ್ ಲಸಿಕೆಯನ್ನು ಹಾಕಿಸಿರಬೇಕು ಎಂಬ ನಿಯಮ ಜಾರಿಗೆ ತರುತ್ತಿದೆ.
ಕಾಸರಗೋಡು ಜಿಲ್ಲೆಯ ಕಾಸರಗೋಡು ನಗರ, ಕುಂಬಳೆ, ಉಪ್ಪಳ, ಕಾಞಂಗಾಡ್, ಚೆರುವತ್ತೂರು, ನೀಲೇಶ್ವರ ನಗರಗಳಲ್ಲಿ ಈ ಹೊಸ ನಿಯಮ ಎ.24ರಿಂದ ಜಾರಿಗೆ ಬರಲಿದೆ. ಜನರು ಮಾರ್ಕೆಟ್, ಶಾಪಿಂಗ್ ಇನ್ನಿತರ ಕಾರಣಕ್ಕೆ ಎಲ್ಲೆಂದರಲ್ಲಿ ಸಂಚರಿಸುವುದು, ಸೇರುವುದನ್ನು ತಪ್ಪಿಸಲು ಜಿಲ್ಲಾಡಳಿತ ಈ ರೀತಿಯ ಕಾನೂನು ಜಾರಿಗೆ ತರಲು ನಿರ್ಧರಿಸಿದೆ.
ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ನೇತೃತ್ವದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಜನರಿಗೆ ಅರಿವು ಮೂಡಿಸುವುದಕ್ಕಾಗಿ ಹೊಸ ನಿಯಮವನ್ನು ತಕ್ಷಣಕ್ಕೆ ಜಾರಿಗೆ ತರದೆ ಒಂದು ವಾರ ಕಾಲ ಸಮಯ ಕೊಡಲಾಗಿದೆ. ಅಷ್ಟರಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕು ಅಥವಾ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಬೇಕು ಎಂದು ಸೂಚನೆ ನೀಡಲಾಗಿದೆ.
ಎ.24 ರ ಬೆಳಗ್ಗೆ 8ರಿಂದ ಹೊಸ ನೀತಿ ಜಾರಿಗೆ ಬರಲಿದ್ದು ಅಲ್ಲಲ್ಲಿ ಪೊಲೀಸರು ಪೆಟ್ರೋಲಿಂಗ್ ನಡೆಸಲಿದ್ದಾರೆ. ತಪಾಸಣೆ ನಡೆಸಲಿದ್ದು, ಲಸಿಕೆ ಹಾಕಿಸಿಕೊಂಡಿದ್ದಕ್ಕೆ ದೃಢಪತ್ರ ಇಲ್ಲದಿದ್ದಲ್ಲಿ ಹಿಂದಕ್ಕೆ ಕಳುಹಿಸಲಿದ್ದಾರೆ.
ಇದೇ ಸೋಮವಾರದಿಂದಲೇ ಹೊಸ ನೀತಿ ಜಾರಿಗೆ ತರುವ ಬಗ್ಗೆ ಜಿಲ್ಲಾಡಳಿತ ನಿರ್ಧರಿಸಿತ್ತು. ಆದರೆ, ಜನರಿಗೆ ಹೊಸ ನೀತಿಯ ಬಗ್ಗೆ ಅರಿವು ಮೂಡಿಸದೆ ಅದನ್ನು ಹೇರಬಾರದು ಎಂಬ ನೆಲೆಯಲ್ಲಿ ಆಡಳಿತಾತ್ಮಕ ಕಾರಣಕ್ಕೆ ಮುಂದಿನ ಶನಿವಾರದಿಂದ ಹೊಸ ನಿಯಮ ಜಾರಿಗೆ ತರಲು ನಿರ್ಧರಿಸಲಾಗಿದೆ. ಈಗ ನಿಷೇಧ ಜಾರಿಗೆ ತಂದಿರುವ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಲಿದ್ದಾರೆ. ಜೊತೆಗೆ ಕೋವಿಡ್ ಲಸಿಕೆ ನೀಡಲು ಕ್ರಮ ಮತ್ತು ಸ್ಥಳದಲ್ಲೇ ಪರೀಕ್ಷೆ ನಡೆಸುವುದಕ್ಕೂ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.
The Kasaragod district administration has imposed restrictions on people entering the town in the wake of surging Covid cases in the state. A Covid negative certificate or full vaccination certificate is needed for people to enter Kasaragod, Kanhangad, Neeleshwaram, Cheruvathur, Uppala and Kumbala towns. District collector Dr D Sajithbabu informed that the restriction will come into effect from Saturday.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm