ಬ್ರೇಕಿಂಗ್ ನ್ಯೂಸ್
24-08-20 09:12 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 24: ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು, ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಹಿರಿಯ ನಾಯಕರ ಪತ್ರ, ಇಂದು ಕಾರ್ಯಕಾರಿ ಸಭೆಯಲ್ಲಿ ನಡೆದ ಬೆಳವಣಿಗೆಗಳು, ಪಕ್ಷದೊಳಗಿನ ಅಸಮಾಧಾನದ ಹೈಡ್ರಾಮಗಳಿಗೆ ತೆರೆ ಬಿದ್ದಿದ್ದು, ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.
ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ 20ಕ್ಕೂ ಹೆಚ್ಚು ಹಿರಿಯ ನಾಯಕರು ಪತ್ರ ಬರೆದ ಬಳಿಕ ಇಂದು ಕಾರ್ಯಕಾರಿ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಪತ್ರ ಬಿಜೆಪಿ ಪ್ರೇರಿತ ಎಂದು ಹೇಳಿದ್ದರು ಎಂದು ವರದಿಯಾಗಿದ್ದು, ಇದು ಪಕ್ಷದೊಳಗೆ ಭಾರೀ ಅಸಮಾಧಾನವನ್ನು ಸೃಷ್ಟಿಸಿತು. ಈ ಬಗ್ಗೆ ಹಿರಿಯ ನಾಯಕರಾದ ಕಪಿಲ್ ಸಿಬಲ್ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಗುಲಾಂ ನಬಿ ಆಝಾದ್ ‘ಬಿಜೆಪಿ ಪ್ರೇರಿತ’ ಎಂದು ಸಾಬೀತಾದರೆ ತಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಆದರೆ ರಾಹುಲ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳೆಂದು ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದರು. ನಂತರ ಕಪಿಲ್ ಸಿಬಲ್ ಟ್ವೀಟ್ ಮಾಡಿ ಸ್ವತಃ ರಾಹುಲ್ ಗಾಂಧಿಯವರೇ ಕರೆ ಮಾಡಿ ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು ಎಂದು ಹೇಳಿದರು. ನಂತರ ತನ್ನ ಹಳೆಯ ಟ್ವೀಟನ್ನು ಅಳಿಸಿ ಹಾಕಿದರು.
ಈ ಎಲ್ಲಾ ಬದಲಾವಣೆ ಬಳಿಕ ಇದೀಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm