ಬ್ರೇಕಿಂಗ್ ನ್ಯೂಸ್
24-08-20 09:12 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 24: ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು, ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಹಿರಿಯ ನಾಯಕರ ಪತ್ರ, ಇಂದು ಕಾರ್ಯಕಾರಿ ಸಭೆಯಲ್ಲಿ ನಡೆದ ಬೆಳವಣಿಗೆಗಳು, ಪಕ್ಷದೊಳಗಿನ ಅಸಮಾಧಾನದ ಹೈಡ್ರಾಮಗಳಿಗೆ ತೆರೆ ಬಿದ್ದಿದ್ದು, ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.
ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ 20ಕ್ಕೂ ಹೆಚ್ಚು ಹಿರಿಯ ನಾಯಕರು ಪತ್ರ ಬರೆದ ಬಳಿಕ ಇಂದು ಕಾರ್ಯಕಾರಿ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಪತ್ರ ಬಿಜೆಪಿ ಪ್ರೇರಿತ ಎಂದು ಹೇಳಿದ್ದರು ಎಂದು ವರದಿಯಾಗಿದ್ದು, ಇದು ಪಕ್ಷದೊಳಗೆ ಭಾರೀ ಅಸಮಾಧಾನವನ್ನು ಸೃಷ್ಟಿಸಿತು. ಈ ಬಗ್ಗೆ ಹಿರಿಯ ನಾಯಕರಾದ ಕಪಿಲ್ ಸಿಬಲ್ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಗುಲಾಂ ನಬಿ ಆಝಾದ್ ‘ಬಿಜೆಪಿ ಪ್ರೇರಿತ’ ಎಂದು ಸಾಬೀತಾದರೆ ತಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಆದರೆ ರಾಹುಲ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳೆಂದು ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದರು. ನಂತರ ಕಪಿಲ್ ಸಿಬಲ್ ಟ್ವೀಟ್ ಮಾಡಿ ಸ್ವತಃ ರಾಹುಲ್ ಗಾಂಧಿಯವರೇ ಕರೆ ಮಾಡಿ ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು ಎಂದು ಹೇಳಿದರು. ನಂತರ ತನ್ನ ಹಳೆಯ ಟ್ವೀಟನ್ನು ಅಳಿಸಿ ಹಾಕಿದರು.
ಈ ಎಲ್ಲಾ ಬದಲಾವಣೆ ಬಳಿಕ ಇದೀಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am