ಬ್ರೇಕಿಂಗ್ ನ್ಯೂಸ್
24-08-20 09:12 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 24: ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು, ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಹಿರಿಯ ನಾಯಕರ ಪತ್ರ, ಇಂದು ಕಾರ್ಯಕಾರಿ ಸಭೆಯಲ್ಲಿ ನಡೆದ ಬೆಳವಣಿಗೆಗಳು, ಪಕ್ಷದೊಳಗಿನ ಅಸಮಾಧಾನದ ಹೈಡ್ರಾಮಗಳಿಗೆ ತೆರೆ ಬಿದ್ದಿದ್ದು, ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.
ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ 20ಕ್ಕೂ ಹೆಚ್ಚು ಹಿರಿಯ ನಾಯಕರು ಪತ್ರ ಬರೆದ ಬಳಿಕ ಇಂದು ಕಾರ್ಯಕಾರಿ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಪತ್ರ ಬಿಜೆಪಿ ಪ್ರೇರಿತ ಎಂದು ಹೇಳಿದ್ದರು ಎಂದು ವರದಿಯಾಗಿದ್ದು, ಇದು ಪಕ್ಷದೊಳಗೆ ಭಾರೀ ಅಸಮಾಧಾನವನ್ನು ಸೃಷ್ಟಿಸಿತು. ಈ ಬಗ್ಗೆ ಹಿರಿಯ ನಾಯಕರಾದ ಕಪಿಲ್ ಸಿಬಲ್ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಗುಲಾಂ ನಬಿ ಆಝಾದ್ ‘ಬಿಜೆಪಿ ಪ್ರೇರಿತ’ ಎಂದು ಸಾಬೀತಾದರೆ ತಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಆದರೆ ರಾಹುಲ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳೆಂದು ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದರು. ನಂತರ ಕಪಿಲ್ ಸಿಬಲ್ ಟ್ವೀಟ್ ಮಾಡಿ ಸ್ವತಃ ರಾಹುಲ್ ಗಾಂಧಿಯವರೇ ಕರೆ ಮಾಡಿ ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು ಎಂದು ಹೇಳಿದರು. ನಂತರ ತನ್ನ ಹಳೆಯ ಟ್ವೀಟನ್ನು ಅಳಿಸಿ ಹಾಕಿದರು.
ಈ ಎಲ್ಲಾ ಬದಲಾವಣೆ ಬಳಿಕ ಇದೀಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm