ಬ್ರೇಕಿಂಗ್ ನ್ಯೂಸ್
24-08-20 09:12 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 24: ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು, ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಹಿರಿಯ ನಾಯಕರ ಪತ್ರ, ಇಂದು ಕಾರ್ಯಕಾರಿ ಸಭೆಯಲ್ಲಿ ನಡೆದ ಬೆಳವಣಿಗೆಗಳು, ಪಕ್ಷದೊಳಗಿನ ಅಸಮಾಧಾನದ ಹೈಡ್ರಾಮಗಳಿಗೆ ತೆರೆ ಬಿದ್ದಿದ್ದು, ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.
ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ 20ಕ್ಕೂ ಹೆಚ್ಚು ಹಿರಿಯ ನಾಯಕರು ಪತ್ರ ಬರೆದ ಬಳಿಕ ಇಂದು ಕಾರ್ಯಕಾರಿ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಪತ್ರ ಬಿಜೆಪಿ ಪ್ರೇರಿತ ಎಂದು ಹೇಳಿದ್ದರು ಎಂದು ವರದಿಯಾಗಿದ್ದು, ಇದು ಪಕ್ಷದೊಳಗೆ ಭಾರೀ ಅಸಮಾಧಾನವನ್ನು ಸೃಷ್ಟಿಸಿತು. ಈ ಬಗ್ಗೆ ಹಿರಿಯ ನಾಯಕರಾದ ಕಪಿಲ್ ಸಿಬಲ್ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಗುಲಾಂ ನಬಿ ಆಝಾದ್ ‘ಬಿಜೆಪಿ ಪ್ರೇರಿತ’ ಎಂದು ಸಾಬೀತಾದರೆ ತಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಆದರೆ ರಾಹುಲ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳೆಂದು ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದರು. ನಂತರ ಕಪಿಲ್ ಸಿಬಲ್ ಟ್ವೀಟ್ ಮಾಡಿ ಸ್ವತಃ ರಾಹುಲ್ ಗಾಂಧಿಯವರೇ ಕರೆ ಮಾಡಿ ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು ಎಂದು ಹೇಳಿದರು. ನಂತರ ತನ್ನ ಹಳೆಯ ಟ್ವೀಟನ್ನು ಅಳಿಸಿ ಹಾಕಿದರು.
ಈ ಎಲ್ಲಾ ಬದಲಾವಣೆ ಬಳಿಕ ಇದೀಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm