ಬ್ರೇಕಿಂಗ್ ನ್ಯೂಸ್
26-04-21 11:01 am Headline Karnataka News Network ದೇಶ - ವಿದೇಶ
Photo credits : REUTERS
ಬಾಗ್ದಾದ್, ಏ. 26: ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದ ಬಾಗ್ದಾದ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು 82 ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬಾಗ್ದಾದ್ನ ಅಲ್ ಖತೀಬಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಶನಿವಾರ ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ. ನಂತರ ಆಸ್ಪತ್ರೆಯ ಇತರೆ ಅಂತಸ್ತುಗಳಿಗೂ ಬೆಂಕಿ ವ್ಯಾಪಿಸಿದೆ. ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿದೆ.
ಈ ಘಟನೆಯಲ್ಲಿ ಒಟ್ಟು 82 ರೋಗಿಗಳು ಮೃತಪಟ್ಟಿದ್ದು, 110 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ರಕ್ಷಣೆ ಮಾಡಲಾಗಿದೆ.
ಆಸ್ಪತ್ರೆಗೆ ರಾತ್ರಿ ಪಾಳಿಗೆ ಬಂದ ನರ್ಸ್, ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ್ದಾರೆ. ತಕ್ಷಣವೇ ರೋಗಿಗಳನ್ನು ಸ್ಥಳಾಂತರಿಸಲು ಮುಂದಾಗಿದ್ದಾರೆ. ನೋಡನೋಡುತ್ತಿದ್ದಂತೆ ಎಲ್ಲೆಡೆ ಬೆಂಕಿ ವ್ಯಾಪಿಸಿ ಅವಘಡ ಸಂಭವಿಸಿದೆ.
ಘಟನೆ ಬೆನ್ನಲ್ಲೇ ಇರಾಕ್ ಪ್ರಧಾನಿ ಮುಸ್ತಾಫಾ ಅಲ್ ಖದಿಮಿ ಸಚಿವ ಸಂಪುತ ಸಭೆ ನಡೆಸಿದ್ದಾರೆ. ಈ ದುರಂತದಲ್ಲಿ ನಿರ್ಲಕ್ಷ್ಯತನ ಅಪರಾಧ ಎಂದು ಖಂಡಿಸಿದ್ದಾರೆ. ಆರೋಗ್ಯ ಸಚಿವ ಹಸನ್ ಅಲ್ ತಮಿಮಿ ಹಾಗೂ ಬಾಗ್ದಾದ್ ರಾಜ್ಯಪಾಲರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
ಸತ್ತವರಲ್ಲಿ 28 ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಾಗರಿಕ ರಕ್ಷಣಾ ತಂಡಗಳು ಭಾನುವಾರ ಬೆಳಗ್ಗಿನವರೆಗೂ ಬೆಂಕಿ ನಂದಿಸಿದ್ದಾರೆ.
ಆಸ್ಪತ್ರೆಯಲ್ಲಿ ಬೆಂಕಿಯಿಂದ ರಕ್ಷಿಸುವ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೆಂಕಿ ತೀವ್ರ ವ್ಯಾಪಿಸಿದೆ. ವೆಂಟಿಲೇಟರ್ಗಳನ್ನು ತೆಗೆದು ಸಾಗಿಸುವ ವೇಳೆ ಹಲವು ರೋಗಿಗಳು ಮೃತಪಟ್ಟಿದ್ದಾರೆ ಎಂದು ಇರಾಕ್ ನಾಗರಿಕ ರಕ್ಷಣಾ ಘಟಕ ತಿಳಿಸಿದೆ.
A fire caused by an oxygen tank explosion at a COVID-19 hospital in Baghdad took at least 82 lives and forced some people to leap through windows out of the burning building, witnesses and authorities said on Sunday.
31-03-25 07:41 pm
Bangalore Correspondent
Yatnal, Lakshmi Hebbalkar, Controversy: ಯತ್ನಾ...
31-03-25 12:24 pm
Areca Nut, Machine Accident, Sirsi: ಅಡಿಕೆ ಸುಲ...
29-03-25 09:19 pm
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
31-03-25 12:26 pm
Mangalore Correspondent
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
31-03-25 09:29 pm
Mangalore Correspondent
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm