ಬ್ರೇಕಿಂಗ್ ನ್ಯೂಸ್
27-04-21 08:42 pm Headline Karnataka News Network ದೇಶ - ವಿದೇಶ
Photo credits : enANI
ಮಧ್ಯಪ್ರದೇಶ: ಮೊನ್ನೆಯಷ್ಟೇ ಕೇರಳದಲ್ಲಿ ಆಸ್ಪತ್ರೆಯೊಂದರ ಕೊವಿಡ್ 19 ವಾರ್ಡ್ನಲ್ಲಿ ಮದುವೆಯೊಂದು ನಡೆದಿತ್ತು. ಕೊವಿಡ್ ಸೋಂಕು ಪಾಸಿಟಿವ್ ಬಂದು ಆಸ್ಪತ್ರೆಗೆ ಅಡ್ಮಿಟ್ ಆಗಿದ್ದ ವರನನ್ನು ವಧು ಪಿಪಿಇ ಕಿಟ್ ಧರಿಸಿ ಬಂದು ವರಿಸಿದ್ದಳು.
ಈಗ ಅಂಥದ್ದೇ ಒಂದು ಮದುವೆ ಮಧ್ಯಪ್ರದೇಶದ ರತ್ಲಮ್ನಲ್ಲಿ ನಡೆದಿದೆ. ಇಲ್ಲೂ ಸಹ ವರನಿಗೆ ಕೊವಿಡ್ 19 ಸೋಂಕು ತಗುಲಿದ್ದರಿಂದ ಇಬ್ಬರೂ ಪಿಪಿಇ ಕಿಟ್ ಧರಿಸಿ ಮದುವೆಯಾಗಿದ್ದಾರೆ.
ವಧು -ವರರು ಪಿಪಿಇ ಕಿಟ್ ಧರಿಸಿ ವಿವಾಹವಾದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಮದುವೆಯಲ್ಲಿ ವಧು-ವರರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುವುದು ಪದ್ಧತಿ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಜೋಡಿ ಪಿಪಿಇ ಕಿಟ್ ಧರಿಸಿ ವಿವಾಹವಾಗಬೇಕಾಯಿತು. ಇವರಿಬ್ಬರೂ ಅಗ್ನಿಕುಂಡದ ಸುತ್ತ ತಿರುಗುವಾಗ ಹಿನ್ನೆಲೆಯಲ್ಲಿ ಮಂತ್ರಗಳ ಪಠಣೆಯನ್ನೂ ಕೇಳಬಹುದು.

ಮದುವೆಗೆ ಮುಹೂರ್ತ ನಿಗದಿಯಾಗಿಹೋಗಿತ್ತು. ಆದರೆ ಏಪ್ರಿಲ್ 19ರಂದು ವರನಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಮದುವೆಯನ್ನು ಮುಂದೂಡುವಂತೆಯೂ ಇರಲಿಲ್ಲ. ಹೀಗಾಗಿ ಸ್ಥಳೀಯ ಹಿರಿಯ ಅಧಿಕಾರಿಗಳ ಅನುಮತಿ ಪಡೆದು ಈ ಜೋಡಿ ವಿವಾಹವಾಗಿದೆ. ನಾವು ಒಪ್ಪಿಗೆ ಕೊಡಲೇಬೇಕಾಯಿತು. ಆದರೆ ಪಿಪಿಇ ಕಿಟ್ ಧರಿಸಿ, ಕೊವಿಡ್ 19 ಮುನ್ನೆಚ್ಚರಿಕಾ ಕ್ರಮದೊಂದಿಗೆ ಮದುವೆಯಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ಜೋಡಿ ಮದುವೆಯಾಗಿದ್ದಾರೆ ಎಂದು ರತ್ಲಮ್ನ ತಹಸೀಲ್ದಾರ್ ತಿಳಿಸಿದ್ದಾರೆ.

ದೇಶದ ಎಲ್ಲ ರಾಜ್ಯಗಳಲ್ಲೂ ಕೊವಿಡ್ ಸೋಂಕು ಹೆಚ್ಚುತ್ತಿರುವ ಕಾರಣಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ಜನರು ಗುಂಪುಗೂಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಮದುವೆ ಕಾರ್ಯಕ್ರಮಕ್ಕೆ ಕೇವಲ 50 ಜನರು ಮಾತ್ರ ಸೇರಬಹುದು ಎಂದು ಸೂಚನೆ ಇದೆ. ಇನ್ನು ಇಲ್ಲಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮತ್ತೊಂದು ಐಡಿಯಾ ಮಾಡಿದ್ದಾರೆ. ಯಾವ ಜೋಡಿ ಕೇವಲ 10 ಜನ ಅತಿಥಿಗಳ ಸಮ್ಮುಖದಲ್ಲಿ ಮದುವೆಯಾಗುತ್ತಾರೋ, ಅವರಿಗೆ ನಮ್ಮ ಮನೆಯಲ್ಲೇ ಆತಿಥ್ಯ, ಔತಣಕೂಟ ವಹಿಸುವುದಾಗಿಯೂ ಹೇಳಿಕೊಂಡಿದ್ದಾರೆ. ಈ ಮೂಲಕ ಜನರು ಗುಂಪುಗೂಡುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ.
#WATCH | Madhya Pradesh: A couple in Ratlam tied the knot wearing PPE kits as the groom is #COVID19 positive, yesterday. pic.twitter.com/mXlUK2baUh
— ANI (@ANI) April 26, 2021
Acouple in Madhya Pradesh's Ratlam got married in PPE kits after the groom tested positive for Covid-19. Both the bride as well as the groom took the pheras as mantras were chanted by a pandit in the backdrop.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm