ಬ್ರೇಕಿಂಗ್ ನ್ಯೂಸ್
27-04-21 08:42 pm Headline Karnataka News Network ದೇಶ - ವಿದೇಶ
Photo credits : enANI
ಮಧ್ಯಪ್ರದೇಶ: ಮೊನ್ನೆಯಷ್ಟೇ ಕೇರಳದಲ್ಲಿ ಆಸ್ಪತ್ರೆಯೊಂದರ ಕೊವಿಡ್ 19 ವಾರ್ಡ್ನಲ್ಲಿ ಮದುವೆಯೊಂದು ನಡೆದಿತ್ತು. ಕೊವಿಡ್ ಸೋಂಕು ಪಾಸಿಟಿವ್ ಬಂದು ಆಸ್ಪತ್ರೆಗೆ ಅಡ್ಮಿಟ್ ಆಗಿದ್ದ ವರನನ್ನು ವಧು ಪಿಪಿಇ ಕಿಟ್ ಧರಿಸಿ ಬಂದು ವರಿಸಿದ್ದಳು.
ಈಗ ಅಂಥದ್ದೇ ಒಂದು ಮದುವೆ ಮಧ್ಯಪ್ರದೇಶದ ರತ್ಲಮ್ನಲ್ಲಿ ನಡೆದಿದೆ. ಇಲ್ಲೂ ಸಹ ವರನಿಗೆ ಕೊವಿಡ್ 19 ಸೋಂಕು ತಗುಲಿದ್ದರಿಂದ ಇಬ್ಬರೂ ಪಿಪಿಇ ಕಿಟ್ ಧರಿಸಿ ಮದುವೆಯಾಗಿದ್ದಾರೆ.
ವಧು -ವರರು ಪಿಪಿಇ ಕಿಟ್ ಧರಿಸಿ ವಿವಾಹವಾದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಮದುವೆಯಲ್ಲಿ ವಧು-ವರರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುವುದು ಪದ್ಧತಿ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಜೋಡಿ ಪಿಪಿಇ ಕಿಟ್ ಧರಿಸಿ ವಿವಾಹವಾಗಬೇಕಾಯಿತು. ಇವರಿಬ್ಬರೂ ಅಗ್ನಿಕುಂಡದ ಸುತ್ತ ತಿರುಗುವಾಗ ಹಿನ್ನೆಲೆಯಲ್ಲಿ ಮಂತ್ರಗಳ ಪಠಣೆಯನ್ನೂ ಕೇಳಬಹುದು.
ಮದುವೆಗೆ ಮುಹೂರ್ತ ನಿಗದಿಯಾಗಿಹೋಗಿತ್ತು. ಆದರೆ ಏಪ್ರಿಲ್ 19ರಂದು ವರನಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಮದುವೆಯನ್ನು ಮುಂದೂಡುವಂತೆಯೂ ಇರಲಿಲ್ಲ. ಹೀಗಾಗಿ ಸ್ಥಳೀಯ ಹಿರಿಯ ಅಧಿಕಾರಿಗಳ ಅನುಮತಿ ಪಡೆದು ಈ ಜೋಡಿ ವಿವಾಹವಾಗಿದೆ. ನಾವು ಒಪ್ಪಿಗೆ ಕೊಡಲೇಬೇಕಾಯಿತು. ಆದರೆ ಪಿಪಿಇ ಕಿಟ್ ಧರಿಸಿ, ಕೊವಿಡ್ 19 ಮುನ್ನೆಚ್ಚರಿಕಾ ಕ್ರಮದೊಂದಿಗೆ ಮದುವೆಯಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ಜೋಡಿ ಮದುವೆಯಾಗಿದ್ದಾರೆ ಎಂದು ರತ್ಲಮ್ನ ತಹಸೀಲ್ದಾರ್ ತಿಳಿಸಿದ್ದಾರೆ.
ದೇಶದ ಎಲ್ಲ ರಾಜ್ಯಗಳಲ್ಲೂ ಕೊವಿಡ್ ಸೋಂಕು ಹೆಚ್ಚುತ್ತಿರುವ ಕಾರಣಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ಜನರು ಗುಂಪುಗೂಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಮದುವೆ ಕಾರ್ಯಕ್ರಮಕ್ಕೆ ಕೇವಲ 50 ಜನರು ಮಾತ್ರ ಸೇರಬಹುದು ಎಂದು ಸೂಚನೆ ಇದೆ. ಇನ್ನು ಇಲ್ಲಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮತ್ತೊಂದು ಐಡಿಯಾ ಮಾಡಿದ್ದಾರೆ. ಯಾವ ಜೋಡಿ ಕೇವಲ 10 ಜನ ಅತಿಥಿಗಳ ಸಮ್ಮುಖದಲ್ಲಿ ಮದುವೆಯಾಗುತ್ತಾರೋ, ಅವರಿಗೆ ನಮ್ಮ ಮನೆಯಲ್ಲೇ ಆತಿಥ್ಯ, ಔತಣಕೂಟ ವಹಿಸುವುದಾಗಿಯೂ ಹೇಳಿಕೊಂಡಿದ್ದಾರೆ. ಈ ಮೂಲಕ ಜನರು ಗುಂಪುಗೂಡುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ.
#WATCH | Madhya Pradesh: A couple in Ratlam tied the knot wearing PPE kits as the groom is #COVID19 positive, yesterday. pic.twitter.com/mXlUK2baUh
— ANI (@ANI) April 26, 2021
Acouple in Madhya Pradesh's Ratlam got married in PPE kits after the groom tested positive for Covid-19. Both the bride as well as the groom took the pheras as mantras were chanted by a pandit in the backdrop.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm