ಬ್ರೇಕಿಂಗ್ ನ್ಯೂಸ್
29-04-21 02:59 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.29: ಭಾರತದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರ ಗತಿಯಲ್ಲಿ ಹರಡುತ್ತಿದ್ದು ಕಳೆದ 24 ಗಂಟೆಗಳಲ್ಲಿ ದಾಖಲೆ ಎಂಬಂತೆ 3.80 ಲಕ್ಷ ಮಂದಿಗೆ ಸೋಂಕು ತಗಲಿದೆ.
ಕಳೆದ ಒಂದು ವಾರದಲ್ಲಿ ಪ್ರತಿ ದಿನವೂ ಮೂರು ಲಕ್ಷಕ್ಕಿಂತ ಹೆಚ್ಚು ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿದೆ. ಎ.22ರಂದು 3,14,835 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಸತತ ಒಂದು ವಾರದಲ್ಲಿ ದಿನವೂ ಮೂರು ಲಕ್ಷಕ್ಕಿಂತ ಹೆಚ್ಚಿನ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಈಗ ದೇಶದಲ್ಲೇ ಅತಿ ಹೆಚ್ಚು ಎಂದರೆ, ದಿನವೊಂದಲ್ಲಿ 3.80 ಲಕ್ಷ ಮಂದಿಗೆ ಸೋಂಕು ಆಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರ ಬೆಳಗ್ಗಿನ ವರೆಗೆ 24 ಗಂಟೆಗಳ ಮಾಹಿತಿ ನೀಡಿದ ಸಚಿವಾಲಯ, ಹೊಸ ಪ್ರಕರಣಗಳ ಸಂಖ್ಯೆ 3,79,257 ಎಂದು ನಮೂದಿಸಿತ್ತು. ಇದೇ ವೇಳೆ, 3645 ಮಂದಿ 24 ಗಂಟೆಯಲ್ಲಿ ಸಾವು ಕಂಡಿದ್ದಾರೆಂದು ಮಾಹಿತಿ ನೀಡಿದೆ. ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದ 2.40 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. ಸೋಂಕಿನಿಂದ ಅತಿ ಹೆಚ್ಚು ಸಾವು ದೇಶಗಳಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ ಇದೆ. ಅಮೆರಿಕ, ಬ್ರೆಝಿಲ್, ಮೆಕ್ಸಿಕೋ ಮೊದಲ ಮೂರು ಸ್ಥಾನಗಳಲ್ಲಿದೆ.

ದೇಶದಲ್ಲಿ ಅತಿ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳುತ್ತಿರುವುದು ಮಹಾರಾಷ್ಟ್ರ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ. ಒಟ್ಟು ಸೋಂಕಿತರ 78 ಶೇ. ಮಂದಿ ಈ ಮೂರು ರಾಜ್ಯಗಳ ಜನರು ಇದ್ದಾರೆ. ಮಹಾರಾಷ್ಟ್ರದಲ್ಲಿ ದಿನದಲ್ಲಿ 66,358 ಮಂದಿಗೆ ಸೋಂಕು ಕಾಣಿಸಿದ್ದರೆ, ಉತ್ತರ ಪ್ರದೇಶದಲ್ಲಿ 32,921 ಮತ್ತು ಕೇರಳದಲ್ಲಿ 32,819 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
India's Daily Covid-19 cases saw yet another massive spike yesterday. A total of 3,79,257 new cases were registered in the last 24 hours. Ten states including Maharashtra, Uttar Pradesh, Delhi, Karnataka, Kerala, Chhattisgarh, West Bengal, Tamil Nadu, Andhra Pradesh and Rajasthan report 72.20% of the new cases.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm