ಬ್ರೇಕಿಂಗ್ ನ್ಯೂಸ್
30-04-21 01:50 pm Headline Karnataka News Network ದೇಶ - ವಿದೇಶ
ಇಸ್ರೇಲ್, ಎ 30: ಯಹೂದಿಯರ ಧಾರ್ಮಿಕ ಸ್ಥಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 44 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಉತ್ತರ ಇಸ್ರೇಲ್ ನಲ್ಲಿ ನಡೆದಿದ್ದು, ಭಾರೀ ಜನಸ್ತೋಮದಿಂದಾಗಿ ಗಾಯಗೊಂಡವರನ್ನು ರಕ್ಷಿಸಲು ರಕ್ಷಣಾ ತಂಡಗಳು ಹರಸಾಹಸಪಡುತ್ತಿರುವುದಾಗಿ ವರದಿ ತಿಳಿಸಿದೆ.
ಎರಡನೇ ಶತಮಾನದ ಟಾಲ್ಮುಡಿಕ್ ಸಂತ ರಬ್ಬಿ ಶಿಮೊನ್ ಬಾರ್ ಯೋಚೈ ಅವರ ಸಮಾಧಿ ಸ್ಥಳವಾದ ಮೆರಾನ್ನಲ್ಲಿ ಸಂಪ್ರದಾಯವಾದಿ ಯಹೂದಿಗಳ ಜನಸ್ತೋಮ ಸೇರಿದ ವೇಳೆ ಈ ಕಾಲ್ತುಳಿತ ಸಂಭವಿಸಿದೆ ಎಂದು ವರದಿ ವಿವರಿಸಿದೆ.
ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಿದ್ದರಿಂದ ಸಾಮೂಹಿಕ ಧಾರ್ಮಿಕ ಕಾರ್ಯಕ್ರಮ ನಡೆದಿರಲಿಲ್ಲವಾಗಿತ್ತು. ಈ ವರ್ಷ ಯಾತ್ರಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ಶ್ರಮಿಸಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ ಎಂದು ವರದಿ ತಿಳಿಸಿದೆ.
ಈ ಬಾರಿಯೂ ಕೋವಿಡ್ ಭೀತಿಯ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಯಹೂದಿಗಳು ಸೇರಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಗ್ಯ ಅಧಿಕಾರಿಗಳು ವಿಧಿಸಿದ್ದ ಕೋವಿಡ್ ನಿಯಮ ಉಲ್ಲಂಘಿಸಿ ಜನಸಮೂಹ ನೆರೆದಿದ್ದು, ಈ ವೇಳೆ ಕುಳಿತುಕೊಳ್ಳಲು ನಿರ್ಮಿಸಿದ್ದ ಸ್ಟೇಡಿಯಂ ಕುಸಿದು ಬಿದ್ದಿದ್ದರಿಂದ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಲು ಆರಂಭಿಸಿದ್ದು, ಕಾಲ್ತುಳಿತ ಸಂಭವಿಸಲು ಕಾರಣವಾಗಿದೆ ಎಂದು ಹೇಳಿದೆ.
ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು, 'ಭೀಕರ ದುರಂತ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
A massive stampede at a densely packed Jewish pilgrimage site killed at least 44 people in northern Israel on Friday, with rescue workers facing chaotic crowds while trying to evacuate the injured.
31-03-25 07:41 pm
Bangalore Correspondent
Yatnal, Lakshmi Hebbalkar, Controversy: ಯತ್ನಾ...
31-03-25 12:24 pm
Areca Nut, Machine Accident, Sirsi: ಅಡಿಕೆ ಸುಲ...
29-03-25 09:19 pm
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
31-03-25 12:26 pm
Mangalore Correspondent
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
31-03-25 09:29 pm
Mangalore Correspondent
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm