ಬ್ರೇಕಿಂಗ್ ನ್ಯೂಸ್
03-05-21 11:34 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 3: ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಲ್ಲಿ ಲಾಕ್ಡೌನ್ ಘೋಷಿಸಿದ ಎರಡು ವಾರಗಳ ಬಳಿಕ, ಪರೀಕ್ಷೆಗೆ ಒಳಪಟ್ಟವರ ಪೈಕಿ ಸೋಂಕು ಪತ್ತೆಯಾಗಿರುವ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.
ಆದರೂ, ಉಸಿರಾಟದ ತೀವ್ರ ಸಮಸ್ಯೆ ಎದುರಿಸುತ್ತಿರುವ ರೋಗಿಗಳು ಆಮ್ಲಜನಕ ದೊರೆಯದೆ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರಗೆ ಎಡತಾಕುವುದು ಮುಂದುವರಿದಿದೆ.
ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟಿರುವ 71,997 ಜನರ ಪೈಕಿ 20,394 (ಶೇ 28.33) ಜನರಲ್ಲಿ ಸೋಂಕು ದೃಢಪಟ್ಟಿದೆ.
ಕಳೆದ 15 ದಿನಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಪರೀಕ್ಷೆಗೆ ಒಳಪಟ್ಟವರಲ್ಲಿ ಸೋಂಕಿಗೆ ಒಳಗಾದವರ ಪ್ರಮಾಣ ಶೇ 30ಕ್ಕಿಂತ ಕಡಿಮೆ ಪ್ರಮಾಣಕ್ಕೆ ಇಳಿದಿದೆ. ಶನಿವಾರ ಶೇ 31.61ರಷ್ಟು ಜನರಲ್ಲಿ ಸೋಂಕು ಪತ್ತೆಯಾಗಿತ್ತು.
24,444 ಜನ ಗುಣಮುಖರಾಗಿದ್ದಾರೆ. ಈ ಸಂಖ್ಯೆಯು ಸೋಂಕಿತರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿರುವುದು ಸ್ವಲ್ಪ ಮಟ್ಟಿನ ಸಮಾಧಾನಕ್ಕೆ ಕಾರಣವಾಗಿದೆ. ಶನಿವಾರದಿಂದ ಹೊಸದಾಗಿ ಸೊಂಕಿಗೆ ಒಳಗಾಗುತ್ತಿರುವವರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿರುವುದೂ ಆತಂಕ ತಗ್ಗಲು ಕಾರಣವಾಗಿದೆ.
ಆದರೆ, ಇದೇ ಅವಧಿಯಲ್ಲಿ ಸಾವಿನ ಪ್ರಮಾಣದಲ್ಲಿ ಸಾಕಷ್ಟು ಪ್ರಮಾಣದ ಸುಧಾರಣೆ ಸಾಧ್ಯವಾಗದೆ, ಒಟ್ಟು 407 ಜನ ಮೃತಪಟ್ಟಿದ್ದಾರೆ. ನಗರದಲ್ಲಿ ಇದುವರೆಗೆ ಕೊರೊನಾಗೆ ಜೀವ ಕಳೆದುಕೊಂಡವರ ಸಂಖ್ಯೆ 16,966ಕ್ಕೆ ತಲುಪಿದೆ.
ಶನಿವಾರ ಒಂದು ಲಕ್ಷಕ್ಕೆ ಸಮೀಪಿಸಿದ್ದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯು 92,290ಕ್ಕೆ ಇಳಿದಿದ್ದರೂ, ಆಸ್ಪತ್ರೆಗಳಲ್ಲಿ ಹಾಸಿಗೆಯ ಕೊರತೆ ಮುಂದುವರಿದಿದೆ.
The Capital on Sunday recorded 407 deaths and 20,394 COVID-19 cases, along with 24,444 recoveries. A health bulletin released by the Delhi government stated that 71,997 tests were conducted and a positivity rate of 28.33% was recorded.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
02-04-25 01:11 pm
HK News Desk
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm