ಬ್ರೇಕಿಂಗ್ ನ್ಯೂಸ್
26-08-20 05:46 pm Headline Karnataka News Network ದೇಶ - ವಿದೇಶ
ಪ್ಯೊಂಗ್ಯಾಂಗ್, ಆಗಸ್ಟ್ 26: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್-ಉನ್ ಕೋಮಾದಲ್ಲಿದ್ದಾರೆಂದು ದಕ್ಷಿಣ ಕೊರಿಯಾದ ರಾಜತಾಂತ್ರಿಕ ಅಧಿಕಾರಿಯೊಬ್ಬರು ಹೇಳಿದ ಕೆಲವೇ ದಿನಗಳಲ್ಲಿ ಉತ್ತರ ಕೊರಿಯಾದ ಆಡಳಿತ ಅವರ ಚಿತ್ರಗಳನ್ನು ಬಿಡುಗಡೆಗೊಳಿಸಿದೆ. ತಮ್ಮ ವರ್ಕರ್ಸ್ ಪಾರ್ಟಿಯ ಉನ್ನತ ಸಭೆಯೊಂದರಲ್ಲಿ ಕಿಮ್ ಜೊಂಗ್ ಉನ್ ಭಾಗವಹಿಸಿದ ಚಿತ್ರಗಳು ಇವಾಗಿವೆ ಎಂದು ಅಲ್ಲಿನ ಸರಕಾರಿ ನಿಯಂತ್ರಿತ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜನ್ಸಿ ತಿಳಿಸಿದೆ.
ಸಭೆಯಲ್ಲಿ ಅವರು ಕೊರೋನವೈರಸ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಹಾಗೂ ಚಂಡಮಾರುತ ಸಂಬಂಧ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಎಂದು ಆ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಈ ಚಿತ್ರಗಳನ್ನು ಯಾವಾಗ ತೆಗೆಯಲಾಗಿದೆ ಎಂಬ ಕುರಿತು ಸ್ಪಷ್ಟತೆಯಿಲ್ಲ.
ಕಿಮ್ ಅವರು ಎಪ್ರಿಲ್ ತಿಂಗಳಿನಿಂದ ಕೋಮಾದಲ್ಲಿದ್ದಾರೆಂದು ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ಕಿಮ್ ಡೇ-ಜುಂಗ್ ಅವರ ಮಾಜಿ ಸಹಾಯಕ ಚಂಗ್ ಸೊಂಗ್ ಮಿನ್ ಅವರು ಹೇಳಿದ ಎರಡೇ ದಿನದಲ್ಲಿ ಈ ಚಿತ್ರಗಳು ಬಿಡುಗಡೆಗೊಂಡಿವೆ.
ಆದರೆ ಚಂಗ್ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ``ಕಿಮ್ ಕೋಮಾದಲ್ಲಿದ್ದಾರೆ ಆದರೆ ಇನ್ನೂ ಬದುಕಿದ್ದಾರೆ, ನಕಲಿ ಚಿತ್ರಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ, ಅವರಿಗೆ ಯಾರು ಉತ್ತರಾಧಿಕಾರಿ ಎಂಬ ಕುರಿತು ಸ್ಪಷ್ಟತೆಯಿಲ್ಲದೇ ಇರುವುದರಿಂದ ಹಾಗೂ ಹೆಚ್ಚು ಕಾಲ ಈ ರೀತಿ ರಹಸ್ಯ ಕಾಪಾಡಲು ಸಾಧ್ಯವಿಲ್ಲದೇ ಇರುವುದರಿಂದ ಅವರ ಸೋದರಿ ಕಿಮ್-ಯೊ-ಜುಂಗ್ ಅವರನ್ನು ಪ್ರಧಾನ ವೇದಿಕೆಗೆ ತರುವ ಯತ್ನಗಳು ನಡೆಯುತ್ತಿವೆ,'' ಎಂದು ಬರೆದಿದ್ದರು.
ಮೂಲಗಳ ಪ್ರಕಾರ ಕಿಮ್ ಜೊಂಗ್-ಉನ್ ಅವರು ತಮ್ಮ ಬಾಡಿ-ಡಬಲ್ ಬಳಸುತ್ತಿರಬಹುದು ಏಕೆಂದರೆ ಇತ್ತೀಚೆಗೆ ಬಿಡುಗಡೆಗೊಳಿಸಲಾದ ಹಲವು ಚಿತ್ರಗಳಿಗೂ ಅವರ ಮೂಲ ಚಿತ್ರಗಳಿಗೂ ವ್ಯತ್ಯಾಸ ಕಾಣುತ್ತಿವೆ ಎಂದು ಹೇಳಲಾಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am