ಬ್ರೇಕಿಂಗ್ ನ್ಯೂಸ್
26-08-20 05:46 pm Headline Karnataka News Network ದೇಶ - ವಿದೇಶ
ಪ್ಯೊಂಗ್ಯಾಂಗ್, ಆಗಸ್ಟ್ 26: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್-ಉನ್ ಕೋಮಾದಲ್ಲಿದ್ದಾರೆಂದು ದಕ್ಷಿಣ ಕೊರಿಯಾದ ರಾಜತಾಂತ್ರಿಕ ಅಧಿಕಾರಿಯೊಬ್ಬರು ಹೇಳಿದ ಕೆಲವೇ ದಿನಗಳಲ್ಲಿ ಉತ್ತರ ಕೊರಿಯಾದ ಆಡಳಿತ ಅವರ ಚಿತ್ರಗಳನ್ನು ಬಿಡುಗಡೆಗೊಳಿಸಿದೆ. ತಮ್ಮ ವರ್ಕರ್ಸ್ ಪಾರ್ಟಿಯ ಉನ್ನತ ಸಭೆಯೊಂದರಲ್ಲಿ ಕಿಮ್ ಜೊಂಗ್ ಉನ್ ಭಾಗವಹಿಸಿದ ಚಿತ್ರಗಳು ಇವಾಗಿವೆ ಎಂದು ಅಲ್ಲಿನ ಸರಕಾರಿ ನಿಯಂತ್ರಿತ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜನ್ಸಿ ತಿಳಿಸಿದೆ.
ಸಭೆಯಲ್ಲಿ ಅವರು ಕೊರೋನವೈರಸ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಹಾಗೂ ಚಂಡಮಾರುತ ಸಂಬಂಧ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಎಂದು ಆ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಈ ಚಿತ್ರಗಳನ್ನು ಯಾವಾಗ ತೆಗೆಯಲಾಗಿದೆ ಎಂಬ ಕುರಿತು ಸ್ಪಷ್ಟತೆಯಿಲ್ಲ.
ಕಿಮ್ ಅವರು ಎಪ್ರಿಲ್ ತಿಂಗಳಿನಿಂದ ಕೋಮಾದಲ್ಲಿದ್ದಾರೆಂದು ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ಕಿಮ್ ಡೇ-ಜುಂಗ್ ಅವರ ಮಾಜಿ ಸಹಾಯಕ ಚಂಗ್ ಸೊಂಗ್ ಮಿನ್ ಅವರು ಹೇಳಿದ ಎರಡೇ ದಿನದಲ್ಲಿ ಈ ಚಿತ್ರಗಳು ಬಿಡುಗಡೆಗೊಂಡಿವೆ.
ಆದರೆ ಚಂಗ್ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ``ಕಿಮ್ ಕೋಮಾದಲ್ಲಿದ್ದಾರೆ ಆದರೆ ಇನ್ನೂ ಬದುಕಿದ್ದಾರೆ, ನಕಲಿ ಚಿತ್ರಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ, ಅವರಿಗೆ ಯಾರು ಉತ್ತರಾಧಿಕಾರಿ ಎಂಬ ಕುರಿತು ಸ್ಪಷ್ಟತೆಯಿಲ್ಲದೇ ಇರುವುದರಿಂದ ಹಾಗೂ ಹೆಚ್ಚು ಕಾಲ ಈ ರೀತಿ ರಹಸ್ಯ ಕಾಪಾಡಲು ಸಾಧ್ಯವಿಲ್ಲದೇ ಇರುವುದರಿಂದ ಅವರ ಸೋದರಿ ಕಿಮ್-ಯೊ-ಜುಂಗ್ ಅವರನ್ನು ಪ್ರಧಾನ ವೇದಿಕೆಗೆ ತರುವ ಯತ್ನಗಳು ನಡೆಯುತ್ತಿವೆ,'' ಎಂದು ಬರೆದಿದ್ದರು.
ಮೂಲಗಳ ಪ್ರಕಾರ ಕಿಮ್ ಜೊಂಗ್-ಉನ್ ಅವರು ತಮ್ಮ ಬಾಡಿ-ಡಬಲ್ ಬಳಸುತ್ತಿರಬಹುದು ಏಕೆಂದರೆ ಇತ್ತೀಚೆಗೆ ಬಿಡುಗಡೆಗೊಳಿಸಲಾದ ಹಲವು ಚಿತ್ರಗಳಿಗೂ ಅವರ ಮೂಲ ಚಿತ್ರಗಳಿಗೂ ವ್ಯತ್ಯಾಸ ಕಾಣುತ್ತಿವೆ ಎಂದು ಹೇಳಲಾಗಿದೆ.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm