ಬ್ರೇಕಿಂಗ್ ನ್ಯೂಸ್
04-05-21 04:10 pm Headline Karnataka News Network ದೇಶ - ವಿದೇಶ
Photo credits : 9news
ಮೆಕ್ಸಿಕೊ, ಮೇ 4 : ಜನನಿಬಿಡ ರಸ್ತೆಯ ಮೇಲೆ ಮೆಟ್ರೋ ಮೇಲ್ಸೇತುವೆ ಕುಸಿದು 23 ಮಂದಿ ಮೃತಪಟ್ಟು 700ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ಮೆಕ್ಸಿಕೋ ಸಿಟಿಯಲ್ಲಿ ನಡೆದಿದೆ.


ಸೋಮವಾರ ರಾತ್ರಿ ಮೆಟ್ರೋ ರೈಲು ಸಂಚಾರ ಮಾಡುತ್ತಿದ್ದ ವೇಳೆಯಲ್ಲಿ ಈ ದುರಂತ ನಡೆದಿದ್ದು, ಮೇಲ್ಸೇತುವೆ ಕುಸಿಯುತ್ತಿದ್ದಂತೆ ರೈಲು ಕೆಳಗೆ ಬಿದ್ದಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಲವರನ್ನು ಕಾಪಾಡಿದ್ದಾರೆ. ಹಾಗೇ, ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನೂ ಹೊರತೆಗೆದಿದ್ದಾರೆ. ಮೊದಲು ಸುಮಾರು 13 ಮೃತದೇಹಗಳು ಸಿಕ್ಕಿದ್ದವು. ಇದೀಗ ಸಾವಿನ ಸಂಖ್ಯೆ ಹೆಚ್ಚಾಗಿದೆ.


ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ.

ಇನ್ನು ರಕ್ಷಣಾ ಕಾರ್ಯಾಚರಣೆಯೂ ಸಹ ಕಷ್ಟಕರವಾಗಿಯೇ ಇತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ ಮೆಕ್ಸಿಕೋ ಸಿಟಿಯ ಮೇಯರ್ ಕ್ಲೌಡಿಯಾ ಶೀನ್ಬಾಮ್, ಮೇಲ್ಸೇತುವ ಕುಸಿದಾಗ ರೈಲು ಅರ್ಧ ಕುಸಿದಿದೆ. ಹಾಗಾಗಿ ರಕ್ಷಣಾ ಕಾರ್ಯಾಚರಣೆ ಕಷ್ಟವಾಯಿತು. ನಂತರ ಸ್ಥಳಕ್ಕೆ ಕ್ರೇನ್ ಕಳಿಸಲಾಯಿತು ಎಂದು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಗೆ ದಾಖಲಾದವರ ಸ್ಥಿತಿ ಕೂಡ ತುಂಬ ಗಂಭೀರವಾಗಿದೆ. ಕೆಲವರಿಗೆ ಸರ್ಜರಿ ನಡೆಸಲಾಗಿದೆ ಎಂದು ಹೇಳಿದ್ದಾರೆ.
at least 13 dead and 70 injured after a metro train cars collapsed from overpass in mexico city #MetroCDMX #CDMX pic.twitter.com/EvjTUt2BVx
— QCON (@sam23858402) May 4, 2021
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm