ಬ್ರೇಕಿಂಗ್ ನ್ಯೂಸ್
07-05-21 04:24 pm Headline Karnataka News Network ದೇಶ - ವಿದೇಶ
Photo credits : NDTV
ದೆಹಲಿ, ಮೇ 7: ಒಂದು ಕಾಲದಲ್ಲಿ ಅಂಡರ್ ವರ್ಲ್ಡ್ ಡಾನ್ ಆಗಿದ್ದ ಮಾಜಿ ಭೂಗತ ಪಾತಕಿ ಛೋಟಾ ರಾಜನ್ (61) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾನೆ ಎಂಬ ಸುದ್ದಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ರಾಜನ್ ಸಾವನ್ನು ಜೈಲಿನ ಅಧಿಕಾರಿಗಳಾಗಲೀ, ಏಮ್ಸ್ ಆಸ್ಪತ್ರೆಯ ವೈದ್ಯರಾಗಲೀ ದೃಢಪಡಿಸಿಲ್ಲ.

ಕಳೆದ ಒಂದು ವಾರದಿಂದ ಗಂಭೀರ ಸ್ಥಿತಿಯಲ್ಲಿರುವ ರಾಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿಗಳು ರಾಷ್ಟ್ರೀಯ ಸುದ್ದಿ ವಾಹಿನಿಗಳು ಮತ್ತು ಟೈಂಸ್ ಆಫ್ ಇಂಡಿಯಾ ಸೇರಿದಂತೆ ದೇಶದ ಪ್ರಮುಖ ಮಾಧ್ಯಮಗಳಲ್ಲಿ ಬಂದಿದ್ದವು. ಆದರೆ, ರಾಜನ್ ಸಾವನ್ನು ತಿಹಾರ್ ಜೈಲಿನ ಡಿಜಿಪಿ ನಿರಾಕರಿಸಿದ್ದಾರೆ. ಏಮ್ಸ್ ಆಸ್ಪತ್ರೆಯಿಂದ ಆ ರೀತಿಯ ಮಾಹಿತಿ ಇನ್ನೂ ಬಂದಿಲ್ಲ ಎಂದಿದ್ದಾರೆ ಡಿಜಿಪಿ.

ಕಳೆದ 2015ರಲ್ಲಿ ಇಂಡೋನೇಶ್ಯಾದಲ್ಲಿ ಬಂಧನಕ್ಕೀಡಾಗಿದ್ದ ರಾಜೇಂದ್ರ ಸದಾಶಿವ ನಿಕಾಲ್ ಜೇ ಅಲಿಯಾಸ್ ಛೋಟಾ ರಾಜನ್ ನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ರಾಜನ್ ನನ್ನು ಪ್ರಕರಣ ಒಂದಕ್ಕೆ ಸಂಬಂಧಿಸಿ ಎ.26ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸೆಷನ್ಸ್ ಕೋರ್ಟಿಗೆ ಹಾಜರು ಪಡಿಸಲಿಕ್ಕಿತ್ತು. ಅದಕ್ಕಾಗಿ ಜೈಲಿನ ಅಧಿಕಾರಿಗಳು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಆತನಿಗೆ ಪಾಸಿಟಿವ್ ಕಂಡುಬಂದಿತ್ತು. ಬಳಿಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ರಾಜನ್ ವಿರುದ್ಧ ಮಹಾರಾಷ್ಟ್ರ, ಕರ್ನಾಟಕ, ದೆಹಲಿ ಸೇರಿ ವಿವಿಧೆಡೆ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಹೆಚ್ಚಿನ ಪ್ರಕರಣಗಳು ಕೋರ್ಟಿನಲ್ಲಿ ವಿಚಾರಣೆ ಹಂತದಲ್ಲಿದ್ದವು. 2011ರಲ್ಲಿ ಕೊಲೆಯಾಗಿದ್ದ ಮುಂಬೈನ ಪತ್ರಕರ್ತ ಜ್ಯೋತಿರ್ಮಯಿ ಡೇ ಪ್ರಕರಣದಲ್ಲಿ 2018ರಲ್ಲಿ ರಾಜನ್ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಕಳೆದ ವಾರವಷ್ಟೇ ಮುಂಬೈನ ಸ್ಪೆಷಲ್ ಸಿಬಿಐ ಕೋರ್ಟ್ ಪ್ರಕರಣ ಒಂದರಲ್ಲಿ ರಾಜನ್ ವಿರುದ್ಧ ಖುಲಾಸೆ ತೀರ್ಪು ನೀಡಿತ್ತು. 1993ರ ಸರಣಿ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆರೋಪಿಯಾಗಿದ್ದ ಹನೀಫ್ ಕಾಡಾವಾಲ ಎಂಬಾತನ ಕೊಲೆ ಪ್ರಕರಣದಲ್ಲಿ ರಾಜನ್ ಮೇಲಿದ್ದ ಆರೋಪವನ್ನು ಕೋರ್ಟ್ ಖುಲಾಸೆ ಮಾಡಿತ್ತು.
ವಿದೇಶದಲ್ಲಿ ತಲೆಮರೆಸಿಕೊಂಡು ಮುಂಬೈ ಸೇರಿ ಪ್ರಮುಖ ನಗರಗಳಲ್ಲಿ ಹಫ್ತಾ ವಸೂಲಿ, ಹಫ್ತಾ ನೀಡದೇ ಇರುತ್ತಿದ್ದ ಉದ್ಯಮಿಗಳನ್ನು ತನ್ನ ಸಹಚರರ ಮೂಲಕ ಹತ್ಯೆ ಮಾಡುತ್ತಿದ್ದ ಛೋಟಾ ರಾಜನ್ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿದ್ದ. ರಾಜನ್ ವಿರುದ್ಧ ಭಾರತ ಸರಕಾರದಿಂದ ರೆಡ್ ಇಂಟರ್ ಪೋಲ್ ನೋಟೀಸ್ ಜಾರಿ ಮಾಡಲಾಗಿತ್ತು. ಇದೇ ವೇಳೆ, 2015ರಲ್ಲಿ ಇಂಡೋನೇಶ್ಯಾದ ಬಾಲಿ ದ್ವೀಪದಲ್ಲಿ ಅಲ್ಲಿನ ಪೊಲೀಸರು ನಕಲಿ ಪಾಸ್ಪೋರ್ಟಿಗೆ ಸಂಬಂಧಿಸಿ ರಾಜನನ್ನು ಬಂಧಿಸಿದ್ದರು. ಬಳಿಕ ಭಾರತಕ್ಕೆ ಗಡೀಪಾರು ಆಗಿದ್ದ ರಾಜನ್ ವಿರುದ್ಧ ಹಲವಾರು ಪ್ರಕರಣಗಳು ಇದ್ದುದರಿಂದ ಎಲ್ಲವನ್ನೂ ಸಿಬಿಐ ತಂಡ ತನಿಖೆಗೆ ಕೈಗೆತ್ತಿಕೊಂಡಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಭಾರೀ ಭದ್ರತೆಯ ನಡುವೆ, ರಾಜನ್ ಅನ್ನು ಇರಿಸಿ ವಿಚಾರಣೆ ಮಾಡಲಾಗುತ್ತಿತ್ತು.

2019ರಲ್ಲಿ ಮುಂಬೈ ಮೂಲದ ಹೊಟೇಲ್ ಉದ್ಯಮಿ ಬಿ.ಆರ್. ಶೆಟ್ಟಿಯನ್ನು ಕೊಲೆಗೈದ ಪ್ರಕರಣದಲ್ಲಿ ರಾಜನ್ ಮೇಲೆ ಕೋರ್ಟ್ ಎಂಟು ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ರೂ. ದಂಡ ವಿಧಿಸಿತ್ತು. 2012ರಲ್ಲಿ ಬಿ.ಆರ್. ಶೆಟ್ಟಿಯನ್ನು ಛೋಟಾ ರಾಜನ್ ಅಣತಿಯಂತೆ, ಆತನ ಶಾರ್ಪ್ ಶೂಟರ್ ಆಗಿದ್ದ ಕಾಲಿಯಾ ಎಂಬಾತ ಗುಂಡು ಹಾರಿಸಿ ಕೊಲೆಗೈದಿದ್ದ ಎಂದು ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದರು.
Read: ಭೂಗತ ಪಾತಕಿ ಛೋಟಾರಾಜನ್ ಗೆ ಕೋವಿಡ್ ಪಾಸಿಟಿವ್ ; ತಿಹಾರ್ ಜೈಲಿನಿಂದ ಆಸ್ಪತ್ರೆಗೆ ದಾಖಲು
Underworld don Chhota Rajan is still alive. He is admitted at AIIMS for treatment of #COVID19: AIIMS official
— ANI (@ANI) May 7, 2021
(File photo) pic.twitter.com/gvAgKDuPqC
Underworld don and gangster Chhota Rajan died due to coronavirus disease (Covid-19) at All India Institute of Medical Services (AIIMS) New Delhi on Friday. But the hospital has refuses saying the gangster is alive and is under treatment
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm