ಬ್ರೇಕಿಂಗ್ ನ್ಯೂಸ್
11-05-21 12:12 pm Headline Karnataka News Network ದೇಶ - ವಿದೇಶ
Photo credits : Representative Image
ತಿರುಪತಿ, ಮೇ 11: ವೈದ್ಯಕೀಯ ಆಮ್ಲಜನಕ ಪೂರೈಕೆಯಲ್ಲಿ ಆಗಿರುವ ವಿಳಂಬದಿಂದ 11 ಮಂದಿ ಕೊರೊನಾವೈರಸ್ ಸೋಂಕಿತರು ಪ್ರಾಣ ಬಿಟ್ಟಿರುವ ಘಟನೆ ಆಂಧ್ರ ಪ್ರದೇಶ ಚಿತ್ತೋರ್ ಜಿಲ್ಲೆಯ ತಿರುಪತಿಯಲ್ಲಿ ಇರುವ ಆಸ್ಪತ್ರೆಯಲ್ಲಿ ನಡೆದಿದೆ.
ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ತುರ್ತು ನಿಗಾ ಘಟಕದಲ್ಲಿ ದಾಖಲಾದ ಕೊವಿಡ್-19 ರೋಗಿಗಳಿಗೆ ಸೂಕ್ತ ಸಮಯದಲ್ಲಿ ವೈದ್ಯಕೀಯ ಆಕ್ಸಿಜನ್ ಪೂರೈಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ 11 ರೋಗಿಗಳು ಚಿಕಿತ್ಸೆ ಸಿಗದೇ ಪ್ರಾಣ ಬಿಟ್ಟಿದ್ದಾರೆ ಎಂದು ಚಿತ್ತೂರ್ ಜಿಲ್ಲಾಧಿಕಾರಿ ಎಂ ಹರಿ ನಾರಾಯಣ್ ತಿಳಿಸಿದ್ದಾರೆ.

ವೈದ್ಯಕೀಯ ಆಮ್ಲಜನಕದ ಸಿಲಿಂಡರ್ ಅನ್ನು ರಿ-ಲೋಡ್ ಮಾಡುವ ಸಂದರ್ಭದಲ್ಲಿ 5 ನಿಮಿಷಗಳ ಕಾಲ ವಿಳಂಬವಾಗಿದೆ. ಈ ವೇಳೆ ಒತ್ತಡ ಹೆಚ್ಚಾದ ಹಿನ್ನೆಲೆ ಸಾವು ಸಂಭವಿಸಿದೆ. ಈ ಹಿನ್ನೆಲೆ ಹೆಚ್ಚಿನ ಅಪಾಯವನ್ನು ತಪ್ಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಐದು ನಿಮಿಷಗಳಲ್ಲೇ ಆಕ್ಸಿಜನ್ ಸಿಲಿಂಡರ್ ರಿ-ಲೋಡ್ ಮಾಡಲಾಗುತ್ತಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ. ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ವೈದ್ಯಕೀಯ ಆಮ್ಲಜನಕ ಪೂರೈಕೆ ವಿಳಂಬದಿಂದ 11 ಮಂದಿ ಮೃತಪಡುತ್ತಿದ್ದಂತೆ ವೈದ್ಯರು ಎಚ್ಚೆತ್ತುಕೊಂಡಿದ್ದಾರೆ. ತುರ್ತು ನಿಗಾ ಘಟಕದ ರೋಗಿಗಳ ಚಿಕಿತ್ಸೆಗೆ ಏಕಕಾಲದಲ್ಲಿ 30ಕ್ಕೂ ಹೆಚ್ಚು ವೈದ್ಯರು ಧಾವಿಸಿದ್ದಾರೆ. ರುಯಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ, ಸೂಕ್ತ ಸಮಯದಲ್ಲಿ ಎಲ್ಲವೂ ಸರಬರಾಜು ಆಗುತ್ತಿದೆ. ಇದೇ ಆಸ್ಪತ್ರೆಯ ಐಸಿಯು ಮತ್ತು ಆಮ್ಲಜನಕ ಸಹಿತ ಹಾಸಿಗೆಗಳಲ್ಲಿ 700 ಕೊವಿಡ್-19 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, 300 ಸೋಂಕಿತರಿಗೆ ಸಾಮಾನ್ಯ ವಾರ್ಡ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ ಹರಿ ನಾರಾಯಣ್ ಹೇಳಿದ್ದಾರೆ.
ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ನಡೆದ 11 ಕೊವಿಡ್-19 ರೋಗಿಗಳ ಸಾವಿನ ಸಿಎಂ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿರುವ ಮುಖ್ಯಮಂತ್ರಿ ಜಗನ್, ಇಂಥ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Eleven Covid patients who were in the ICU died at a government hospital in Andhra Pradesh's Tirupati on Monday evening after the supply of medical oxygen was disrupted. The deaths have been reported at a time when India is fighting a deadly second Covid wave and shortage of medical oxygen has emerged as a key challenge.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm