ಬ್ರೇಕಿಂಗ್ ನ್ಯೂಸ್
12-05-21 12:18 pm Headline Karnataka News Network ದೇಶ - ವಿದೇಶ
Photo credits : pharmaceutical
ನವದೆಹಲಿ,ಮೇ 12: ಭಾರತ್ ಬಯೋಟೆಕ್ನ 'ಕೋವ್ಯಾಕ್ಸಿನ್' ಕೋವಿಡ್–19 ಲಸಿಕೆಯನ್ನು ಎರಡು ವರ್ಷ ವಯಸ್ಸಿನಿಂದ 18 ವರ್ಷ ವಯೋಮಾನದವರಲ್ಲಿ ಕ್ಲಿನಿಕಲ್ ಟ್ರಯಲ್ ನಡೆಸಲು ತಜ್ಞರ ಸಮಿತಿಯು ಮಂಗಳವಾರ ಶಿಫಾರಸು ಮಾಡಿದೆ.
ದೆಹಲಿಯ ಏಮ್ಸ್ , ಪಟನಾದ ಏಮ್ಸ್ ಹಾಗೂ ನಾಗ್ಪುರದ ಮೆಡಿಟ್ರಿನಾ ಇನ್ಸ್ಟಿಟ್ಯೂಟ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲಾಗುತ್ತದೆ.


'ಮೂರನೇ ಹಂತದ ಪ್ರಯೋಗಕ್ಕೂ ಮುನ್ನ, ಎರಡನೇ ಹಂತದ ಕ್ಲಿನಿಕಲ್ ಟ್ರಯಲ್ನ ಮಧ್ಯಂತರ ಅಧ್ಯಯನ ವರದಿ (ಸುರಕ್ಷತೆಗೆ ಸಂಬಂಧಿಸಿದ ದತ್ತಾಂಶ) ಜೊತೆಗೆ ಡಿಎಸ್ಎಂಬಿ ಶಿಫಾರಸುಗಳನ್ನು ಸಿಡಿಎಸ್ಸಿಒಗೆ ಸಲ್ಲಿಸಬೇಕು' ಎಂದು ಕೇಂದ್ರ ಔಷಧ ಮತ್ತು ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಸಿಡಿಎಸ್ಸಿಒ) ಕೋವಿಡ್–19 ತಜ್ಞರ ಸಮಿತಿಯು ಶಿಫಾರಸು ಮಾಡಿರುವುದಾಗಿ ವರದಿಯಾಗಿದೆ. ಎರಡು ವರ್ಷ ವಯಸ್ಸಿನ ಮಕ್ಕಳಿಂದ 18 ವರ್ಷದ ವಯೋಮಾನದವರ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಟ್ರಯಲ್ ನಡೆಸಲು ಭಾರತ್ ಬಯೋಟೆಕ್ ಮನವಿ ಸಲ್ಲಿಸಿತ್ತು.
ಫೆಬ್ರುವರಿ 24ರಂದು ಈ ಪ್ರಸ್ತಾವನೆಯ ಬಗ್ಗೆ ಚರ್ಚಿಸಲಾಗಿತ್ತು ಹಾಗೂ ಕ್ಲಿನಿಕಲ್ ಟ್ರಯಲ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಷ್ಕೃತ ವಿವರ ಸಲ್ಲಿಸುವಂತೆ ತಿಳಿಸಲಾಗಿತ್ತು. ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೋವ್ಯಾಕ್ಸಿನ್ ಲಸಿಕೆ ಅಭಿವೃದ್ಧಿ ಪಡಿಸಲಾಗಿದೆ.
Bharat Biotech's COVID-19 vaccine Covaxin was on Tuesday recommended by an expert panel for phase II/III clinical trial on those aged between two to 18 years, official sources said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm