ಬ್ರೇಕಿಂಗ್ ನ್ಯೂಸ್
27-08-20 12:58 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.27: 24 ಗಂಟೆಗಳಲ್ಲಿ ದೇಶಾದ್ಯಂತ 9,24,998 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ತಪಾಸಣೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲೇ 75760 ಜನರಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಒಂದೇ ದಿನ 1023 ಸೋಂಕಿತರು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 60472ಕ್ಕೆ ಏರಿಕೆಯಾಗಿದೆ. ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 3310235ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಒಟ್ಟು 3310235 ಕೊರೊನಾವೈರಸ್ ಸೋಂಕಿತ ಪ್ರಕರಣ ಪೈಕಿ 25,23,772 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,25,991 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 3,85,76,510 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ವಿಶ್ವದಲ್ಲಿ 2,43,32,275 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಜಗತ್ತಿನಲ್ಲಿ 8,29,666 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,68,73,305 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm