ಬ್ರೇಕಿಂಗ್ ನ್ಯೂಸ್
27-08-20 09:47 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಕೊರೋನಾ ವೈರಸ್ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಜಿಎಸ್ಟಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬಿದ್ದಿದ್ದು, ರಾಜ್ಯಗಳಿಗೆ ಹೆಚ್ಚಿನ ಜಿಎಸ್ಟಿ ಪರಿಹಾರ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ತಿಳಿಸಿದ್ದಾರೆ. ಇಂದು ಆನ್ಲೈನ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ 41ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.
2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ 1.65 ಲಕ್ಷ ಕೋಟಿಗೂ ಹೆಚ್ಚು ಜಿಎಸ್ಟಿ ಪರಿಹಾರ ಹಣ ನೀಡಲಾಗಿದೆ. 97 ಸಾವಿರ ಕೋಟಿ ರೂ ಪರಿಹಾರ ಹಣದ ಕೊರತೆ ಬೀಳುವ ಅಂದಾಜು ಇದೆ ಎಂದು ಕೇಂದ್ರ ಹಣಕಾಸು ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಕೇಂದ್ರ ಸರ್ಕಾರದ ಪ್ರಕಾರ ಈ ವರ್ಷ ಜಿಎಸ್ಟಿ ಸಂಗ್ರಹದಲ್ಲಿ 2.35 ಲಕ್ಷ ಕೋಟಿ ಕೊರತೆ ಬೀಳುತ್ತಿದೆ. ಜಿಎಸ್ಟಿ ಸಂಗ್ರಹದಲ್ಲಿ ವ್ಯತ್ಯವಾದರೆ ಸರ್ಕಾರವೇ ಭರ್ತಿ ಮಾಡಬೇಕೆಂದು ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳು ಈ ಸಂದರ್ಭದಲ್ಲಿ ಒತ್ತಾಯಿಸಿದವು. ಆದರೆ, ಬಿಕ್ಕಟ್ಟಿನಿಂದ ಜಿಎಸ್ಟಿ ಸಂಗ್ರಹಕ್ಕೆ ಧಕ್ಕೆಯಾಗಿದ್ದರೆ ರಾಜ್ಯಗಳಿಗೆ ಪೂರ್ಣ ಜಿಎಸ್ಟಿ ಪಾಲು ಕೊಡಬೇಕೆಂಬ ನಿಯಮ ಇಲ್ಲವೆಂದು ಕೇಂದ್ರ ಸರ್ಕಾರ ಕಾನೂನು ಉಲ್ಲೇಖಿಸಿ ಸಭೆಯಲ್ಲಿ ಸ್ಪಷ್ಟಪಡಿಸಿತು.
ಎಲ್ಲಾ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದ ಈ ಜಿಎಸ್ಟಿ ಸಭೆಯಲ್ಲಿ ಆದಾಯ ಕೊರತೆ ನೀಗಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಯಿತು. ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದ್ದರೆ ರಾಜ್ಯ ಸರ್ಕಾರಗಳು ಹಣವನ್ನು ಸಾಲವಾಗಿ ಪಡೆಯಬಹುದು, ಸೆಸ್ ಮೊದಲಾದ ತೆರಿಗೆ ದರ ಏರಿಸಿ ಆದಾಯ ಮಾಡಬಹುದು ಎಂಬಿತ್ಯಾದಿ ಸಲಹೆಗಳು ಕೆಲ ರಾಜ್ಯಗಳಿಂದ ವ್ಯಕ್ತವಾದವು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm