ಬ್ರೇಕಿಂಗ್ ನ್ಯೂಸ್
17-05-21 02:03 pm Headline Karnataka News Network ದೇಶ - ವಿದೇಶ
Photo credits : skymetweather
ಮುಂಬೈ, ಮೇ 17: ಉತ್ತರ ಭಾಗದತ್ತ ಹೊರಳುತ್ತಿರುವ ತೌಕ್ತೆ ಚಂಡಮಾರುತ ಇಂದು ಬೆಳಗ್ಗೆ ಮುಂಬೈ ಹಾದು ಹೋಗಿದೆ. ನಿನ್ನೆ ಸಂಜೆಯಿಂದ ಮುಂಬೈನಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುತ್ತಿದ್ದು ಹೆದ್ದಾರಿ ಮತ್ತು ವಿಮಾನ ಸಂಚಾರಕ್ಕೆ ಬ್ರೇಕ್ ಬಿದ್ದಿದೆ. ಮಹಾರಾಷ್ಟ್ರ ಕರಾವಳಿಯಲ್ಲಿ ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮುಂಬೈನಲ್ಲಿ ಮೇ 17ರ (ಇಂದು) ಸಂಜೆಯ ವರೆಗೆ ವಿಮಾನ ನಿಲ್ದಾಣ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಬಾಂದ್ರಾ- ವೂರ್ಲಿ ನಡುವಿನ ಸಮುದ್ರ ಮಾರ್ಗವನ್ನೂ ಸ್ಥಗಿತ ಮಾಡಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಸೋಮವಾರ ಬೆಳಗ್ಗೆ ಚಂಡಮಾರುತದ ವೇಗ ಗಂಟೆಗೆ 180 ಕಿಮೀ ಇರಲಿದ್ದು ಭಾರೀ ಗಾಳಿಯೊಂದಿಗೆ ಮಳೆ ಬೀಳಲಿದೆ ಎಂದು ತಿಳಿಸಿತ್ತು. ಇದೇ ವೇಳೆ, ಮೇ 17ರಂದು ಸಂಜೆಯ ವೇಳೆಗೆ ಮಹಾರಾಷ್ಟ್ರ ಕಳೆದು ಗುಜರಾತ್ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಅದರಂತೆ, ಇಂದು ರಾತ್ರಿ ವೇಳೆಗೆ ಗುಜರಾತಿನ ಪೋರಬಂದರ್ ಮತ್ತು ಭಾವನಗರ್ ಜಿಲ್ಲೆಯಲ್ಲಿ ಭಾರೀ ಗಾಳಿ, ಮಳೆಯೊಂದಿಗೆ ಚಂಡಮಾರುತ ಅಪ್ಪಳಿಸಲಿದೆ. ಗುಜರಾತಿನಲ್ಲಿ ಅಹ್ಮದಾಬಾದ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತೀವ್ರ ಪ್ರಭಾವ ಬೀರಲಿದೆ ಎನ್ನುವ ಮುನ್ಸೂಚನೆ ನೀಡಲಾಗಿದೆ.



ಚಂಡಮಾರುತ ಎದುರಿಸುವ ಸಲುವಾಗಿ ಗುಜರಾತ್ ಕರಾವಳಿಯಲ್ಲಿ ಅಪಾಯ ಸಾಧ್ಯತೆಯುಳ್ಳ ಪ್ರದೇಶಗಳಿಂದ ಈಗಾಗ್ಲೇ 1.5 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎನ್ ಡಿಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ಪಡೆಯ 54 ತಂಡಗಳನ್ನು ಗುಜರಾತ್ ಕರಾವಳಿಯಲ್ಲಿ ಸನ್ನದ್ಧ ಇರಿಸಲಾಗಿದೆ ಎಂದು ಅಲ್ಲಿನ ಸರಕಾರ ಹೇಳಿಕೊಂಡಿದೆ.
ಮಹಾರಾಷ್ಟ್ರದ ರತ್ನಗಿರಿ, ಸಿಂಧುದುರ್ಗ ಮತ್ತು ರಾಯಗಢ ಜಿಲ್ಲೆಯ ಕರಾವಳಿ ಭಾಗದಲ್ಲಿರುವ 12 ಸಾವಿರ ಜನರನ್ನು ಭಾನುವಾರವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು. ಈ ನಡುವೆ, ದೇವದುರ್ಗ ಜಿಲ್ಲೆಯಲ್ಲಿ ನಾಲ್ವರು ಮೀನುಗಾರರು ಕಾಣೆಯಾಗಿದ್ದಾರೆಂದು ವರದಿಯಾಗಿದೆ.
#CycloneTauktae | Heavy rain and winds partially hit Mumbai’s Bandra Kurla Complex (BKC) #COVID care centre. pic.twitter.com/Rsdnuj2uJg
— ANI (@ANI) May 17, 2021
Operations at Mumbai's Chhatrapati Shivaji Maharaj International Airport will be closed for three hours on Monday due to Cyclone Tauktae, an airport spokesperson has said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm