ಬ್ರೇಕಿಂಗ್ ನ್ಯೂಸ್
18-05-21 03:17 pm Headline Karnataka News Network ದೇಶ - ವಿದೇಶ
Photo credits : The Indian Express
ಚಂಡೀಗಢ, ಮೇ 18: ಲೀವಿಂಗ್ ರಿಲೇಶನ್ ಸಂಬಂಧಗಳು ನೈತಿಕವಾಗಿ ಮತ್ತು ಸಾಮಾಜಿಕ ನೆಲೆಯಲ್ಲಿ ಒಪ್ಪತಕ್ಕದ್ದಲ್ಲ ಮತ್ತು ಸ್ವೀಕಾರಾರ್ಹವೂ ಅಲ್ಲ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹುಡುಗ- ಹುಡುಗಿ ಮನೆ ಬಿಟ್ಟು ಓಡಿ ಹೋಗಿದ್ದಲ್ಲದೆ, ಮದುವೆಯಾಗುವ ಮುನ್ನ ಜೊತೆಗೆ ಬಾಳುವುದಕ್ಕೆ ಅನುಮತಿ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ರೀತಿಯ ತೀರ್ಪು ನೀಡಿದೆ. ದೇಶದಲ್ಲಿ ಲೀವಿಂಗ್ ರಿಲೇಶನ್ ಸಂಬಂಧಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಹೈಕೋರ್ಟ್ ಇಂತಹ ಅಭಿಪ್ರಾಯ ವ್ಯಕ್ತಪಡಿಸಿದ್ದು ಮಹತ್ವ ಪಡೆದುಕೊಂಡಿದೆ.

ಪಂಜಾಬ್ ಪ್ರಾಂತ್ಯದ ಗುಲ್ಝಾ ಕುಮಾರಿ (19) ಮತ್ತು ಗುರ್ವಿಂದರ್ ಸಿಂಗ್ (22) ಎಂಬ ಇಬ್ಬರು ಮನೆ ಬಿಟ್ಟು ಓಡಿ ಬಂದಿದ್ದು ನಾವು ಸದ್ಯದಲ್ಲೇ ಮದುವೆಯಾಗುತ್ತೇವೆ. ಅಲ್ಲೀವರೆಗೆ ಜೊತೆಯಾಗಿರಲು ಅನುಮತಿ ನೀಡಬೇಕು ಎಂದು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಅರ್ಜಿದಾರರು ಲೀವಿಂಗ್ ರಿಲೇಶನ್ ಶಿಪ್ ಹೊಂದಲು ಬಯಸಿದ್ದಾರೆ. ಆದರೆ, ಈ ರೀತಿಯ ಸಂಬಂಧಗಳು ಸಮಾಜದಲ್ಲಿ ಸ್ವೀಕಾರಾರ್ಹವಲ್ಲ. ಒಪ್ಪುವಂಥದ್ದೂ ಅಲ್ಲ. ಹೀಗಾಗಿ ಈ ರೀತಿಯ ಸಂಬಂಧಗಳ ಬಗ್ಗೆ ಯಾವುದೇ ರೀತಿಯ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಅಲ್ಲದೆ, ಯುವಜೋಡಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಮಾಹಿತಿ ಪ್ರಕಾರ, ಹುಡುಗಿಯ ಮದುವೆಗೆ ಆಕೆಯ ಹೆತ್ತವರು ಒಪ್ಪಿಗೆ ನೀಡಿಲ್ಲ. ಹೆತ್ತವರ ವಿರೋಧದ ಮಧ್ಯೆ ಲೂಧಿಯಾನದಿಂದ ಹುಡುಗಿಯನ್ನು ತಾರನ್ ಜಿಲ್ಲೆಗೆ ಹುಡುಗ ಕರೆದೊಯ್ದು ಜೊತೆಗೆ ವಾಸ ಮಾಡಲಾರಂಭಿಸಿದ್ದ. ಆಕೆಯ ವಯಸ್ಸು ಭರ್ತಿಯಾಗಿರುವ ಬಗ್ಗೆ ದಾಖಲೆ ಪತ್ರಗಳು ಲಭ್ಯವಿಲ್ಲದ ಕಾರಣ ಹುಡುಗಿಯನ್ನು ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಹುಡುಗಿ ಮನೆಯವರ ಭಯದಿಂದ ಪೊಲೀಸರ ರಕ್ಷಣೆ ಬೇಕೆಂದು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
The Punjab and Haryana high court has made it clear that the “live-in-relationship is morally or socially not acceptable.” Justice H S Madaan passed these orders while dismissing the petition filed by a runaway couple from Punjab’s Tarn Taran district seeking protection of their life and liberty. The couple, in this case, was in a “live-in” relationship.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm