ಬ್ರೇಕಿಂಗ್ ನ್ಯೂಸ್
18-05-21 04:34 pm Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಮೇ 18: ಕೊರೊನಾ ಸೋಂಕು ಏನೆಲ್ಲಾ ವಿಚಿತ್ರಗಳಿಗೆ ಸಾಕ್ಷಿಯಾಗುತ್ತಿದೆ ಅನ್ನೋದನ್ನು ಊಹಿಸುವಂತಿಲ್ಲ. ಉತ್ತರ ಪ್ರದೇಶದ ಬಾರಾಮತಿ ಜಿಲ್ಲೆಯಲ್ಲಿ ಕುಟುಂಬವೊಂದು 76 ವರ್ಷದ ಅಜ್ಜಿ ಕೊರೊನಾ ಸೋಂಕಿನಿಂದ ಸತ್ತಿದ್ದಾರೆಂದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿತ್ತು. ಆದರೆ, ಇನ್ನೇನು ಅಂತ್ಯವಿಧಿ ಮುಗಿಸಬೇಕು ಎನ್ನುವಷ್ಟರಲ್ಲಿ ಅಜ್ಜಿ ಕಣ್ಣು ಬಿಟ್ಟುಕೊಂಡು ಅಳಲು ಆರಂಭಿಸಿದ್ದಾರೆ. ಅಲ್ಲಿ ಸೇರಿದ್ದ ಕುಟುಂಬಸ್ಥರು ಅಚ್ಚರಿಯಿಂದ ಗಲಿಬಿಲಿಗೊಂಡಿದ್ದಾರೆ.
ಬಾರಾಮತಿ ಜಿಲ್ಲೆಯ ಮುಧಾಳೆ ಎಂಬ ಗ್ರಾಮದಲ್ಲಿ ಈ ರೀತಿಯ ಘಟನೆ ನಡೆದಿದೆ. ಹೀಗೆ ಸತ್ತು ಬದುಕಿದ ವೃದ್ಧ ಮಹಿಳೆಯನ್ನು 76 ವರ್ಷದ ಶಕುಂತಳಾ ಗಾಯಕ್ವಾಡ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಕೋವಿಡ್ ಪಾಸಿಟಿವ್ ಆಗಿದ್ದ ಮಹಿಳೆಯನ್ನು ಮನೆಯಲ್ಲೇ ಐಸೋಲೇಶನ್ ಮಾಡಲಾಗಿತ್ತು. ಆದರೆ, ವೃದ್ಧೆಯಾಗಿದ್ದರಿಂದ ಮಹಿಳೆಯ ದೇಹಸ್ಥಿತಿ ಬಿಗಡಾಯಿಸಿತ್ತು. ಹೀಗಾಗಿ ವೃದ್ಧೆಯನ್ನು ಮೇ 10ರಂದು ಬಾರಾಮತಿಯ ಖಾಸಗಿ ಆಸ್ಪತ್ರೆ ಒಂದಕ್ಕೆ ಒಯ್ಯಲಾಯಿತು.

ಕುಟುಂಬಸ್ಥರು ಆಸ್ಪತ್ರೆಯಲ್ಲಿ ವಿಚಾರಿಸಿದಾಗ, ಬೆಡ್ ಸಿಗಲಿಲ್ಲ. ಹೊರಗೆ ಕಾರಿನಲ್ಲಿ ಮಲಗಿದ್ದ ಅಜ್ಜಿ ಕೋಮಾಕ್ಕೆ ಜಾರಿದ್ದಲ್ಲದೆ, ನಿಶ್ಚಲವಾಗಿ ಬಿದ್ದುಕೊಂಡಿದ್ದರು. ಇದನ್ನು ಕಂಡ ಕುಟುಂಬಸ್ಥರು ಅಜ್ಜಿ ಮೃತಪಟ್ಟಿದ್ದಾಗಿ ನಂಬಿ ನೇರವಾಗಿ ಮನೆಗೆ ತಂದಿದ್ದಾರೆ. ಇತರೇ ಕುಟುಂಬಸ್ಥರಿಗೂ ಈ ಬಗ್ಗೆ ತಿಳಿಸಿದ್ದು, ಎಲ್ಲರೂ ಅಜ್ಜಿಯನ್ನು ಕೊನೆಯ ಬಾರಿಗೆ ನೋಡಲು ಮನೆಗೆ ಆಗಮಿಸಿದ್ದರು. ಜೊತೆಗೆ ಅಂತ್ಯಕ್ರಿಯೆ ನಡೆಸುವುದಕ್ಕೂ ತಯಾರಿ ನಡೆಸಿದ್ದರು.
ಅತ್ತ ಅಂತ್ಯವಿಧಿಗಳನ್ನು ನಡೆಸಲು ಮನೆಯಲ್ಲಿ ಸಿದ್ಥತೆ ನಡೆಸುತ್ತಿರುವಾಗಲೇ ಅಜ್ಜಿ ಬಾಯಿ ತೆರೆದುಕೊಂಡಿದ್ದು, ಅಳುವುದನ್ನು ಆರಂಭಿಸಿದ್ದಾಳೆ. ಕಣ್ಣು ಬಿಟ್ಟುಕೊಂಡು ಎಲ್ಲರೂ ಸೇರಿದ್ದನ್ನು ನೋಡಿ, ದಂಗಾಗಿದ್ದಾರೆ. ಕೂಡಲೇ ಮನೆಯವರು ಆಕೆಯನ್ನು ಮತ್ತೊಂದು ಆಸ್ಪತ್ರೆಗೆ ಒಯ್ದಿದ್ದು, ದಾಖಲು ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೂ ಸುದ್ದಿ ಮುಟ್ಟಿದ್ದು ಮನೆಗೆ ತೆರಳಿ ಎಡವಟ್ಟು ಆಗಿರುವುದನ್ನು ದೃಢಪಡಿಸಿದ್ದಾರೆ. ಅಜ್ಜಿಗೇನೋ ಆಯುಷ್ಯ ಇತ್ತು. ಸ್ವಲ್ಪ ಹೊತ್ತು ಕಳೆಯುತ್ತಿದ್ದರೆ, ದೇಹ ಚಿತೆಗೆ ಬಿದ್ದು ಅಂತಿಮ ಯಾನ ಕೈಗೊಳ್ಳುತ್ತಿದ್ದರು.
In a bizarre incident, a 76-year-old woman who was believed to be dead came to life moments before she was to be cremated as her family members prepared for her last rites, at Mudhale village in Baramati.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm