ಬ್ರೇಕಿಂಗ್ ನ್ಯೂಸ್
21-05-21 11:42 am Headline Karnataka News Network ದೇಶ - ವಿದೇಶ
Photo credits : Times Now
ನವದೆಹಲಿ, ಮೇ 21: ಪಶ್ಚಿಮ ಕರಾವಳಿಯಲ್ಲಿ ಈಗಾಗ್ಲೇ ತೌಕ್ತೆ ಚಂಡಮಾರುತದ ಹೊಡೆತದಿಂದಾಗಿ ಗಾಳಿ ಮಳೆಯ ಜೊತೆ ಸಮುದ್ರ ಉಕ್ಕೇರಿದ್ದರಿಂದ ಹಲವು ಕಡೆಗಳಲ್ಲಿ ನಾಶ- ನಷ್ಟಗಳಾಗಿದ್ದವು. ಸಮುದ್ರದಲ್ಲಿ ಬೋಟ್ ಸಿಕ್ಕಿಬಿದ್ದು ದುರಂತವೂ ಎದುರಾಗಿತ್ತು. ಇದೀಗ ದೇಶದ ಪೂರ್ವ ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಎದ್ದಿದ್ದು, ಬಂಗಾಶ ಕೊಲ್ಲಿಯ ಕರಾವಳಿಗೆ ಅಪ್ಪಳಿಸಲು ರೆಡಿಯಾಗುತ್ತಿದೆ. ಮೇ 25-26ರ ವೇಳೆಗೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಯಾಸ್ ಹೆಸರಿನ ಚಂಡಮಾರುತ ಅಪ್ಪಳಿಸಲಿದೆ.
ಬಂಗಾಳ ಕೊಲ್ಲಿ ಭಾಗದಲ್ಲಿ ಮೀನುಗಾರರಿಗೆ ಹವಾಮಾನ ಇಲಾಖೆ ಮತ್ತು ಕೋಸ್ಟ್ ಗಾರ್ಡ್ ಪಡೆಯಿಂದ ಎಚ್ಚರಿಕೆ ನೀಡಲಾಗುತ್ತಿದ್ದು ಸಮುದ್ರಕ್ಕೆ ತೆರಳಿದ್ದವರು ಕೂಡಲೇ ಹಿಂತಿರುಗುವಂತೆ ಸೂಚನೆ ನೀಡಲಾಗುತ್ತಿದೆ. ಅಂಡಮಾನ್ ದ್ವೀಪದ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು ಮೇ 22ರ ವೇಳೆಗೆ ಇದು ಚಂಡಮಾರುತದ ರೂಪ ಪಡೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.



ಉತ್ತರದಿಂದ ಪಶ್ಚಿಮಕ್ಕೆ ಯಾಸ್ ಚಂಡಮಾರುತ ಬೀಸಲಿದ್ದು, ಮೇ 26ರ ವೇಳೆಗೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿರುಗಾಳಿ ಮತ್ತು ಭಾರೀ ಮಳೆಯಾಗಲಿದೆ. ಇದರ ಪರಿಣಾಮ ಆಂಧ್ರಪ್ರದೇಶ, ಅಸ್ಸಾಂ, ಮೇಘಾಲಯ ಸೇರಿದಂತೆ ಆಸುಪಾಸಿನ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ತೌಕ್ತೆ ಚಂಡಮಾರುತದ ಕಾರಣ ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿತ್ತು. ಕಳೆದ ಬಾರಿಯೂ 2020ರ ಮೇ ತಿಂಗಳಲ್ಲಿ ಇದೇ ರೀತಿ ಪೂರ್ವ ಮತ್ತು ಪಶ್ಚಿಮ ಭಾಗದಲ್ಲಿ ಪ್ರತ್ಯೇಕ ಎರಡು ಚಂಡಮಾರುತ ಕಾಣಿಸಿಕೊಂಡಿತ್ತು. ಪೂರ್ವದಲ್ಲಿ ಅಂಫಾನ್ ಮತ್ತು ದೇಶದ ಪಶ್ಚಿಮ ಭಾಗದಲ್ಲಿ ನಿಸರ್ಗದ ಹಾವಳಿಗೆ ಮುಂಗಾರು ಮಳೆಯನ್ನು ಹೊತ್ತು ತಂದಿದ್ದಲ್ಲದೆ, ಭಾರೀ ಮಳೆಯಾಗಿ ಆರಂಭದಲ್ಲೇ ಕೆಲವು ಕಡೆ ಆಸ್ತಿಪಾಸ್ತಿ ನಷ್ಟಗಳಾಗಿದ್ದವು.
ಈ ಬಾರಿಯೂ ಅದೇ ರೀತಿಯ ಪರಿಸರ ಬದಲಾವಣೆ ಪುನರಾವರ್ತನೆಯಾಗಿದೆ. ತೌಕ್ತೆ ಮತ್ತು ಯಾಸ್ ಹೆಸರಿನ ಚಂಡಮಾರುತ ದೇಶದ ಸುದೀರ್ಘ ಕರಾವಳಿಯಲ್ಲಿ ಗಾಳಿ ಮಳೆಯ ಪ್ರಕೋಪ ತಂದಿತ್ತಿದೆ.
After Cyclone Tauktae battered the states along the west coast, another cyclone is likely to make landfall on the Odisha-West Bengal coast around May 26 morning.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm