ಬ್ರೇಕಿಂಗ್ ನ್ಯೂಸ್
01-08-20 06:37 am Headline Karnataka News Network ದೇಶ - ವಿದೇಶ
ನವದೆಹಲಿ: ಆ. 01: ಇಂದಿನಿಂದ ಮೂರನೇ ಹಂತದ ಅನ್ಲಾಕ್ ಜಾರಿ ಆಗುತ್ತಿದೆ. ಆದರೆ ಕೊರೊನಾ ಸೋಂಕು ಹರಡುವಿಕೆ ಮಾತ್ರ ನಿಯಂತ್ರಣಕ್ಕೆ ಬಂದಿಲ್ಲ. ಕೊರೋನಾ ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ ತೀವ್ರಗೊಂಡಾಗ ಅನ್ಲಾಕ್ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಕಳೆದ ಮೂರು ದಿನಗಳಿಂದ ಪ್ರತಿದಿನವೂ ಅರ್ಧ ಲಕ್ಷಕ್ಕೂ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳುವ ಟ್ರೆಂಡ್ ಕೂಡ ಆರಂಭವಾಗಿದೆ.
ಹೀಗೆ ಮುಂದುವರಿದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನುಡಿದಿದ್ದ ಭವಿಷ್ಯದಂತೆ ಆಗಸ್ಟ್ 10ರೊಳಗೆ ದೇಶದ ಕೊರೊನಾ ಪೀಡಿತರ ಸಂಖ್ಯೆ 20 ಲಕ್ಷ ದಾಟಲಿದೆ. ಭಾರತದಲ್ಲಿ ಜುಲೈ 1ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಮಾತ್ರ ದಾಖಲಾಗಿದ್ದವು. ನಂತರ ನೋಡನೋಡುತ್ತಿದ್ದಂತೆ ಜುಲೈ 10ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದವು. ಅದಾದಮೇಲೆ ಜುಲೈ 20ರಿಂದ 37 ಸಾವಿರಕ್ಕೂ ಪ್ರಕರಣಗಳು ಪತ್ತೆಯಾದವು ಈಗ ಜುಲೈ 31ಕ್ಕೆ 57,117 ಪ್ರಕರಣಗಳು ಕಂಡುಬಂದಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 16,95,988ಕ್ಕೆ ಏರಿಕೆಯಾಗಿದೆ.
ಇದಲ್ಲದೆ ಶುಕ್ರವಾರ 764 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 36 ಸಾವಿರದ ಗಡಿ ದಾಟಿದ್ದು 36,511ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 10,94,374 ಜನ ಮಾತ್ರ. ದೇಶದಲ್ಲಿ ಇನ್ನೂ 5,65,103 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜುಲೈ 1ರಂದು 19,148, ಜುಲೈ 2ರಂದು 20,903, ಜುಲೈ 3 ರಂದು 22,771, ಜುಲೈ 4ರಂದು 24,850, ಜುಲೈ 5 ರಂದು 24,248, ಜುಲೈ 6ರಂದು 22,252, ಜುಲೈ 7ರಂದು 22,752, ಜುಲೈ 8ರಂದು 24,879, ಜುಲೈ 9ರಂದು 26,506, ಜುಲೈ 10ರಂದು 27,114, ಜುಲೈ 11ರಂದು 28,637, ಜುಲೈ 12ರಂದು 28,701, ಜುಲೈ 13ರಂದು 28,498, ಜುಲೈ 14ರಂದು 29,429, ಜುಲೈ 15ರಂದು 32,695, ಜುಲೈ 16ರಂದು 34,956, ಜುಲೈ 17ರಂದು 34,884, ಜುಲೈ 18ರಂದು 38,902, ಜುಲೈ 19ರಂದು 40,425, ಜುಲೈ 20ರಂದು 37,148, ಜುಲೈ 21ರಂದು 37,724, ಜುಲೈ 22ರಂದು 45,720, ಜುಲೈ 23ರಂದು 49,310, ಜುಲೈ 24ರಂದು 48,916, ಜುಲೈ 25ರಂದು 48,661, ಜುಲೈ 26ರಂದು 49,931, ಜುಲೈ 27ರಂದು 47,704, ಜುಲೈ 28ರಂದು 48,512 ಹಾಗೂ ಜುಲೈ 29ರಂದು 52,123, ಜುಲೈ 30ರಂದು 55,079 ಹಾಗೂ ಜುಲೈ 31ರಂದು 57,117 ಹೊಸ ಪ್ರಕರಣಗಳು ಪತ್ತೆಯಾಗಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm