ಬ್ರೇಕಿಂಗ್ ನ್ಯೂಸ್
01-06-21 04:46 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 1: ಕೊರೊನಾ ಸೋಂಕಿನ ಅಟ್ಟಹಾಸದ ಮಧ್ಯೆ ಸಿಬಿಎಸ್ಐ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾಡಬೇಕೇ, ಬೇಡವೇ ಎನ್ನುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ. ಈಗಾಗ್ಲೇ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರಿಂದ ಅಭಿಪ್ರಾಯಗಳನ್ನು ಪಡೆದಿದ್ದು, ಆ ಬಗ್ಗೆ ಅಧಿಕಾರಿಗಳಿಂದ ಪರಾಮರ್ಶೆ ನಡೆದಿದೆ.
ಇಂದು ರಾತ್ರಿ 9 ಗಂಟೆಗೆ ಪ್ರಮುಖ ಸಚಿವರು ಮತ್ತು ಅಧಿಕಾರಿಗಳ ಜೊತೆ ಮೋದಿ ಚರ್ಚೆ ನಡೆಸಲಿದ್ದು, ಅಂತಿಮ ನಿರ್ಧಾರಕ್ಕೆ ಬಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ನ್ಯೂಸ್ 18 ರಾಷ್ಟ್ರೀಯ ವಾಹಿನಿಯಲ್ಲಿ ವರದಿ ದೃಢಪಡಿಸಲಾಗಿದೆ. ಪರೀಕ್ಷೆ ನಡೆಸುವ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರದ ಪ್ರತಿನಿಧಿಗಳ ಸಭೆ ಮತ್ತು ಚರ್ಚೆಯ ಬಳಿಕ ಮೂರು ವಿಚಾರಗಳಲ್ಲಿ ಅಂತಿಮ ನಿರ್ಣಯಕ್ಕೆ ಬರಲಾಗಿತ್ತು.
ಕಳೆದ ಬಾರಿಯೂ ಪರೀಕ್ಷೆ ನಡೆಸದೇ ಪಾಸ್ ಮಾಡಿದ್ದರಿಂದ ಈ ಬಾರಿ ಸರಳವಾಗಿಯಾದರೂ ಪರೀಕ್ಷೆ ನಡೆಸಬೇಕೆಂಬ ಅಭಿಪ್ರಾಯವೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮೂರು ವಿಚಾರಗಳ ಬಗ್ಗೆ ನಿರ್ಧಾರಕ್ಕೆ ಬರಲಾಗಿತ್ತು. ಅವುಗಳೆಂದರೆ, ಎ. ಪ್ರಮುಖ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸುವುದು, ಬಿ. ಅಬ್ಜೆಕ್ಟಿವ್ ಮಾದರಿಯಲ್ಲಿ ನೇರ ಉತ್ತರದ ಪರೀಕ್ಷೆ ನಡೆಸುವುದು, ಸಿ. ಹಿಂದಿನ ಮೂರು ವರ್ಷಗಳಲ್ಲಿ ವಿದ್ಯಾರ್ಥಿಗಳ ನಿರ್ವಹಣೆ ಆಧರಿಸಿ, ಅಂಕ ನೀಡುವುದು. ಈ ಬಗ್ಗೆ ಕೇಂದ್ರ ಸರಕಾರ ಅಂತಿಮ ನಿರ್ಣಯ ತೆಗೆದುಕೊಳ್ಳಲಿದ್ದು, ನಿರ್ಣಯವನ್ನು ಸುಪ್ರೀಂ ಕೋರ್ಟಿಗೆ ಜೂನ್ 3ರಂದು ಸಲ್ಲಿಸಲಿದೆ.
ಈಗಾಗ್ಲೇ ಸಿಬಿಎಸ್ ಐ ಬೋರ್ಡ್ ಜುಲೈ 15ರಿಂದ 26ರ ವರೆಗೆ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ಪ್ರಕಟಿಸಿತ್ತು. ಆದರೆ, ಕೊರೊನಾ ಮಿತಿಮೀರಿದ ಸಮಯದಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಯ ನೆಪದಲ್ಲಿ ಪ್ರಯೋಗಕ್ಕೆ ಒಡ್ಡುವುದು ಬೇಡ ಎಂದು ಪೋಷಕರು ಕೋರ್ಟ್ ಕದ ತಟ್ಟಿದ್ದರು. ಇದರ ಮಧ್ಯದಲ್ಲೇ ಸಿಐಎಸ್ ಇ ಬೋರ್ಡ್, ವಿದ್ಯಾರ್ಥಿಗಳ ಕಳೆದ ಮೂರು ವರ್ಷಗಳ ನಿರ್ವಹಣೆಯ ಬಗ್ಗೆ ವರದಿ ಸಂಗ್ರಹಿಸಲು ಶಾಲೆಗಳಿಗೆ ಸೂಚನೆ ನೀಡಿದೆ. ಅದರ ವರದಿಯನ್ನು ಜೂನ್ 7ರ ಒಳಗೆ ಸಲ್ಲಿಸಲು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೆ ಹಿಂದಿನ ಸಾಧನೆಯನ್ನು ಪರಿಗಣಿಸಿ ಅಂಕ ನೀಡುವುದಕ್ಕೇ ಸರಕಾರ ಒತ್ತು ಕೊಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
CBSE Class 12 board exam 2021 Live Updates: PM Modi will chair a key meeting to discuss options. Education minister Ramesh Pokhriyal has been admitted to AIIMS due to post-COVID complications.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 09:38 pm
Mangalore Correspondent
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm