ಬ್ರೇಕಿಂಗ್ ನ್ಯೂಸ್
03-06-21 12:09 pm Headline Karnataka News Network ದೇಶ - ವಿದೇಶ
Photo credits : tv9kannada
ಚೆನ್ನೈ, ಜೂನ್ 3: ಮಹಾಮಾರಿ ಕೊರೊನಾ ಸೋಂಕು ತಗುಲಿರಬಹುದು ಎಂಬ ಭಯಕ್ಕೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಕೊರೊನಾ ಭಯಕ್ಕೆ ಮಗಳೊಂದಿಗೆ ತಂದೆ, ತಾಯಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದು 2-3ದಿನಗಳಿಂದ ಕುಟುಂಬಸ್ಥರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹಾಗೂ ಜ್ವರ ಕಡಿಮೆಯಾಗದ್ದಿದ್ದರಿಂದ ಕೊರೊನಾ ಬಂದಿರಬಹುದೆಂದು ಶಂಕಿಸಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಚೆನ್ನೈನ ತಿರುಮುಲ್ಲಾವಿಯೂಲ್ನ ದಿಲ್ಲಿ ಬಾಬು(70), ಆತನ ಪತ್ನಿ ಮಹೇಶ್ವರಿ, ಹಾಗೂ ಇವರ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ನೇಣು ಹಾಕಿಕೊಂಡು ಇಡೀ ಕುಟುಂಂಬ ಆತ್ಮಹತ್ಯೆ ಮಾಡಿಕೊಂಡಿದೆ. ತಿರುಮುಲ್ಲಾವಿಯೂಲ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಚೆನ್ನೈ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇನ್ನು ಕೆಲ ತಿಂಗಳ ಹಿಂದೆ ತಮಿಳುನಾಡಿನ ಚೆನ್ನೈನಲ್ಲಿ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಕೊರೊನಾ ಸೋಂಕಿನಿಂದಾಗಿ ಗಂಡ-ಹೆಂಡತಿ ಬೇರೆ ಉಳಿಯುವ ಪರಿಸ್ಥಿತಿ ಬರಬಹುದು ಎಂಬ ಭಯಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ತಮ್ಮ ಕೋಣೆಯ ಮನೆಯ ಚಾವಣಿಗೆ ನೀರಿಯ ಮೂಲಕ ಇಬ್ಬರೂ ನೇಣಿಗೆ ಶರಣಾಗಿದ್ದರು. ಅರ್ಜುನನ್ (70) ಮತ್ತು ಅಂಜಲಿ (60) ಮೃತ ದಂಪತಿ. ಮೊದಲಿಗೆ ಅರ್ಜುನನ್ಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದ್ದರು. ಆದ್ರೆ ಕೊರೊನಾ ವರದಿ ಇನ್ನೂ ಬಂದಿರಲಿಲ್ಲ. ಆದರೆ ಕೊರೊನಾ ಸೋಂಕು ಇರುವುದು ದೃಢಪಟ್ಟರೆ ಇಬ್ಬರೂ ಬೇರೆ ಇರಬೇಕಾಗುತ್ತೆ ಎಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.
Family Commits to Suicide over Corona Fear in Chennai
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm