ಬ್ರೇಕಿಂಗ್ ನ್ಯೂಸ್
01-08-20 06:55 am Headline Karnataka News Network ದೇಶ - ವಿದೇಶ
ಅಲಾಸ್ಕ, ಆ 01: ವಿಮಾನಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಶಾಸಕ ಸೇರಿ ಏಳು ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ಅಮೆರಿಕದ ಅಲಾಸ್ಕದ ಕೆನೈ ಪೆನಿನ್ಸುಲಾದ ಸೋಲ್ಡೊಟ್ನಾ ನಗರದ ವಿಮಾನ ನಿಲ್ದಾಣದ ಸಮೀಪದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನ ಪತನದಲ್ಲಿ ಮೃತಪಟ್ಟವರನ್ನು ಶಾಸಕ ಗ್ಯಾರಿ ನೂಪ್, ಪೈಲಟ್ ಗ್ರೆಗೋರಿ ಬೆಲ್ (67), ಗೈಡ್ ಡೇವಿಡ್ ರೋಜರ್ಸ್ (40) ಮತ್ತು ಸೌಥ್ ಕರೊಲಿನಾ ಪ್ರವಾಸಿಗರಾದ ಕಲೆಬ್ ಹಸ್ಲಿ (26), ಹೆದರ್ ಹಸ್ಲಿ (25), ಮೆಕಾಯ್ ಹಸ್ಲಿ (24) ಮತ್ತು ಕ್ರಿಸ್ಟಿ ರೈಟ್ (23) ಎಂದು ಗುರುತಿಸಲಾಗಿದೆ.
ಎರಡು ವಿಮಾನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಯಾರೂ ಕೂಡಾ ಬದುಕುಳಿದಿಲ್ಲ. ಅಲಾಸ್ಕಾ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದ ಶಾಸಕ ಗ್ಯಾರಿ ನೂಪ್ ವಿಮಾನವೊಂದರಲ್ಲಿ ಏಕಾಂಗಿಯಾಗಿ ವಾಪಾಸ್ಸಾಗುತ್ತಿದ್ದರು. ಇನ್ನೊಂದು ವಿಮಾನವು ಅಲಾಸ್ಕಾ ಕಡೆಗೆ ಸೌಥ್ ಕರೊನಾದಿಂದ ಬರುತ್ತಿದ್ದು, ಈ ವಿಮಾನದಲ್ಲಿ ನಾಲ್ಕು ಪ್ರವಾಸಿಗರು ಸೇರಿದಂತೆ ಓರ್ವ ಗೈಡ್ ಮತ್ತು ಪೈಲಟ್ ಇದ್ದರು.
ಮಾಯು ಮಾರ್ಗದ ನಡುವೆ ಎರಡು ವಿಮಾನಗಳ ಮುಖಾಮುಖಿ ಡಿಕ್ಕಿಯ ಪರಿಣಾಮ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಓರ್ವನನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಮೃತ ಶಾಸಕ ಗ್ಯಾರಿ ನೂಪ್ ಅವರು ಓರ್ವ ರಿಪಬ್ಲಿಕನ್ ಹಾಗೂ ರಾಜ್ಯ ಸದನದ ಉಭಯ ಪಕ್ಷೀಯ ಬಹುಮತದ ಸದಸ್ಯರಾಗಿದ್ದರು. ಇವರ ಈ ದುರಂತ ಸಾವಿಗೆ ಹಲವಾರ ಸಹೋದ್ಯೋಗಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇವರು ತಮ್ಮ ಪ್ರದೇಶದ ಅಭಿವೃದ್ದಿಗಾಗಿ ದುಡಿಯುತ್ತಿದ್ದು, ಇಂತಹ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಹೋದ್ಯೋಗಿಗಳು ದುಃಖಿತರಾಗಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.
2019ರ ಮೇ ತಿಂಗಳಿನಲ್ಲಿ ಕೆಟ್ಟಿಕನ್ ಬಳಿ ವಿಮಾನಗಳ ಡಿಕ್ಕಿ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm